<p><strong>ಸೀತಾಪುರ:</strong> ಉತ್ತರ ಪ್ರದೇಶದ ಲಖಿಂಪುರ–ಖೇರಿಗೆ ತೆರಳುತ್ತಿದ್ದಾಗ ಸೀತಾಪುರ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅತಿಥಿಗೃಹವೊಂದರಲ್ಲಿ ಇರಿಸಲಾಗಿದೆ. ಅವರು ಅಲ್ಲಿಯೇ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>ವಾದ್ರಾ ಸತ್ಯಾಗ್ರಹ ಆರಂಭಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕರು ಅತಿಥಿಗೃಹದ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ಅವರ ಬಂಧನ ವಿರೋಧಿಸಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಈ ಮಧ್ಯೆ ಪ್ರಿಯಾಂಕಾ ಗಾಂದಿ ಅವರು ತಾವಿರುವ ಕೊಠಡಿಯ ಕಸ ಗುಡಿಸುತ್ತಿರುವ 45 ಸೆಕೆಂಡ್ಗಳ ವಿಡಿಯೊವನ್ನುಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ವಿಕಾಸ್ ಶ್ರೀವಾಸ್ತವ ಬಿಡುಗಡೆ ಮಾಡಿದ್ದರು. ದೃಶ್ಯಗಳು ವೈರಲ್ ಆಗುತ್ತಲೇ, ಉತ್ತರ ಪ್ರದೇಶದ ವಕ್ತಾರ ಅಖಿಲೇಶ್ ಸಿಂಗ್ ಸೇರಿದಂತೆ ಹಲವು ನಾಯಕರು ಪ್ರಾಂತೀಯ ಸಶಸ್ತ್ರ ಕಾನ್ಸ್ಟ್ಯಾಬುಲರಿ (ಪಿಎಸಿ) 2ನೇ ಬೆಟಾಲಿಯನ್ನ ಆವರಣದ ಹೊರಗಿನ ರಸ್ತೆಯನ್ನು ಗುಡಿಸಿ ಪ್ರತಿಭಟನೆ ನಡೆಸಿದರು.</p>.<p>ನಂತರ ಮಾತನಾಡಿದ್ದ ಶ್ರೀವಾಸ್ತವ, ‘ ಪ್ರಿಯಾಂಕಾ ಗಾಂಧಿ ಅವರದ್ದು ಒಂದೇ ಬೇಡಿಕೆ. ಅದು, ರೈತರನ್ನು ಭೇಟಿಯಾಗಬೇಕು ಎಂಬುದು,‘ ಎಂದು ಹೇಳಿದ್ದಾರೆ.</p>.<p>‘ಪ್ರಿಯಾಂಕಾ ಗಾಂಧಿಯನ್ನು ಬಂಧಿಸಲಾಗಿದೆ. ಅವರು ಉಪವಾಸ ನಿರತರಾಗಿದ್ದಾರೆ. ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಲೆಬಾಗಬೇಕು. ನ್ಯಾಯಕ್ಕಾಗಿ ಧ್ವನಿಯನ್ನು ಎತ್ತುತ್ತೇವೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೀತಾಪುರ:</strong> ಉತ್ತರ ಪ್ರದೇಶದ ಲಖಿಂಪುರ–ಖೇರಿಗೆ ತೆರಳುತ್ತಿದ್ದಾಗ ಸೀತಾಪುರ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅತಿಥಿಗೃಹವೊಂದರಲ್ಲಿ ಇರಿಸಲಾಗಿದೆ. ಅವರು ಅಲ್ಲಿಯೇ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>ವಾದ್ರಾ ಸತ್ಯಾಗ್ರಹ ಆರಂಭಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕರು ಅತಿಥಿಗೃಹದ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ಅವರ ಬಂಧನ ವಿರೋಧಿಸಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಈ ಮಧ್ಯೆ ಪ್ರಿಯಾಂಕಾ ಗಾಂದಿ ಅವರು ತಾವಿರುವ ಕೊಠಡಿಯ ಕಸ ಗುಡಿಸುತ್ತಿರುವ 45 ಸೆಕೆಂಡ್ಗಳ ವಿಡಿಯೊವನ್ನುಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ವಿಕಾಸ್ ಶ್ರೀವಾಸ್ತವ ಬಿಡುಗಡೆ ಮಾಡಿದ್ದರು. ದೃಶ್ಯಗಳು ವೈರಲ್ ಆಗುತ್ತಲೇ, ಉತ್ತರ ಪ್ರದೇಶದ ವಕ್ತಾರ ಅಖಿಲೇಶ್ ಸಿಂಗ್ ಸೇರಿದಂತೆ ಹಲವು ನಾಯಕರು ಪ್ರಾಂತೀಯ ಸಶಸ್ತ್ರ ಕಾನ್ಸ್ಟ್ಯಾಬುಲರಿ (ಪಿಎಸಿ) 2ನೇ ಬೆಟಾಲಿಯನ್ನ ಆವರಣದ ಹೊರಗಿನ ರಸ್ತೆಯನ್ನು ಗುಡಿಸಿ ಪ್ರತಿಭಟನೆ ನಡೆಸಿದರು.</p>.<p>ನಂತರ ಮಾತನಾಡಿದ್ದ ಶ್ರೀವಾಸ್ತವ, ‘ ಪ್ರಿಯಾಂಕಾ ಗಾಂಧಿ ಅವರದ್ದು ಒಂದೇ ಬೇಡಿಕೆ. ಅದು, ರೈತರನ್ನು ಭೇಟಿಯಾಗಬೇಕು ಎಂಬುದು,‘ ಎಂದು ಹೇಳಿದ್ದಾರೆ.</p>.<p>‘ಪ್ರಿಯಾಂಕಾ ಗಾಂಧಿಯನ್ನು ಬಂಧಿಸಲಾಗಿದೆ. ಅವರು ಉಪವಾಸ ನಿರತರಾಗಿದ್ದಾರೆ. ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಲೆಬಾಗಬೇಕು. ನ್ಯಾಯಕ್ಕಾಗಿ ಧ್ವನಿಯನ್ನು ಎತ್ತುತ್ತೇವೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>