ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ’ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಸೇವೆಯನ್ನು ಅವಮಾನಿಸುತ್ತಿದೆ’ ಎಂದು ದೂರಿದ್ದಾರೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಲು ಬಯಸಿದ್ದ ಆಶಾ ಕಾರ್ಯಕರ್ತರ ಮೇಲೆ ಶಹಜಹಾನ್ಪುರದಲ್ಲಿ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ತುಣಕನ್ನು ಟ್ಯಾಗ್ ಮಾಡಿದ್ದಾರೆ.