ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ’ನೋಟು ಅಮಾನ್ಯೀಕರಣ’ ಕ್ರಮ ಕೈಗೊಂಡು ಐದು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ’ಡಿಮಾನಿಟೈಸೇಷನ್ ಡಿಸಾಸ್ಟರ್’ ಹ್ಯಾಷ್ಟ್ಯಾಗ್ನೊಂದಿಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ,’ನೋಟು ರದ್ಧತಿಯಂತಹ ಕ್ರಮಗಳು ಯಶಸ್ವಿಯಾಗಿದ್ದರೆ, ದೇಶದಲ್ಲಿ ಭ್ರಷ್ಟಾಚಾರ ಏಕೆ ಕೊನೆಗೊಂಡಿಲ್ಲ? ಕಪ್ಪು ಹಣ ಏಕೆ ವಾಪಸ್ ಬಂದಿಲ್ಲ? ಹಣಕಾಸಿನ ವ್ಯವಹಾರಗಳು ಏಕೆ ನಗದು ರಹಿತವಾಗಿ ನಡೆಯುತ್ತಿಲ್ಲ? ಭಯೋತ್ಪಾದನೆ ಮೇಲೆ ಏಕೆ ಪರಿಣಾಮಬೀರಿಲ್ಲ ? ಬೆಲೆ ಏರಿಕೆ ನಿಯಂತ್ರಣಕ್ಕೆ ಬಂದಿಲ್ಲ?’ ಎಂದು ಪ್ರಶ್ನಿಸಿದ್ದಾರೆ.