ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯಾಂಕಾ ಗಾಂಧಿ ಎಂಬ ಬಿರುಗಾಳಿ ಚುನಾವಣೆ ಗೆಲುವಿಗೆ ಸಹಾಯಕ: ಅಜಯ್‌ ಲಲ್ಲು

Last Updated 1 ನವೆಂಬರ್ 2021, 10:55 IST
ಅಕ್ಷರ ಗಾತ್ರ

ಲಖನೌ: ಕಾಂಗ್ರೆಸ್‌ ಪಕ್ಷವುಪ್ರಿಯಾಂಕಾ ಗಾಂಧಿ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ಎದುರಿಸಬೇಕು. ಅವರೊಂದು ಬಿರುಗಾಳಿಯಂತೆ, ಚುನಾವಣೆಯಲ್ಲಿ ಎದುರಾಳಿಗಳನ್ನು ದೂಳಿಪಟ ಮಾಡಲು ಸಹಾಯಕ ಎಂದು ರಾಜ್ಯದ ಪಕ್ಷದ ಮುಖ್ಯಸ್ಥ ಅಜಯ್‌ ಕುಮಾರ್‌ ಲಲ್ಲು ಹೇಳಿದ್ದಾರೆ.

ಪ್ರಿಯಾಂಕಾ ಅವರು ಉತ್ತರ ಪ್ರದೇಶದ ಅನೇಕ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದ್ದು ಇದರಿಂದ ಯೋಗಿ ಆದಿತ್ಯನಾಥ್ ಸರ್ಕಾರ ಮುಖಭಂಗ ಅನುಭವಿಸುತ್ತಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಬಹುಮತದೊಂದಿಗೆ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದ ಲಲ್ಲು ಗೆಲ್ಲುವ ಸ್ಥಾನಗಳ ಸಂಖ್ಯೆ ಹೇಳಲು ನಿರಾಕರಿಸಿದರು.

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಕಾಂಗ್ರೆಸ್‌ ಕೇವಲ ಏಳು ಸ್ಥಾನಗಳನ್ನು ಜಯಿಸಿತ್ತು.

‘ನಾವು ಸಂಘಟನಾ ಶಕ್ತಿಯನ್ನು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದೇವೆ. ಉತ್ತರ ಪ್ರದೇಶದಲ್ಲಿ ನಾವೇನೂ ಅಲ್ಲ ಎಂಬ ಭಾವನೆ ಬದಲಾಗಿದೆ. ಇಲ್ಲಿ ಪ್ರಿಯಾಂಕಾ ಗಾಂಧಿ ಎಂಬ ಬಿರುಗಾಳಿಯೊಂದು ಬೀಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಮುನ್ನುಗ್ಗಲು ಇದು ಸಹಾಯಕವಾಗಿದೆ’ ಎಂದು ಲಲ್ಲು ಹೇಳಿದರು.

ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಏಕೆ ಘೋಷಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷದ ರಾಷ್ಟ್ರೀಯ ನಾಯಕತ್ವ ನಿರ್ಧರಿಸುತ್ತದೆ. ಪ್ರಿಯಾಂಕಾ ಅವರ ಉಸ್ತುವಾರಿಯಲ್ಲಿ ಚುನಾವಣೆ ಎದುರಿಸಲಾಗುವುದು’ ಎಂದು ಹೇಳಿದರು.

‘ಪೂರ್ಣ ಬಹುಮತದೊಂದಿಗೆ ನಾವು ರಾಜ್ಯದಲ್ಲಿ ಸರ್ಕಾರ ರಚಿಸಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ಒಂದು ಸಿದ್ಧಾಂತವನ್ನು ಹೊಂದಿದ್ದು ಹೋರಾಟದ ಪ್ರತಿರೂಪವಾಗಿದೆ. ಇದು ಮಾತ್ರ ಬಿಜೆಪಿಗೆ ಪ್ರತಿಸ್ಪರ್ಧೆ ನೀಡಬಲ್ಲದು’ ಎಂದು ಲಲ್ಲು ಹೇಳಿದರು.

ಚುನಾವಣಾ ಮೈತ್ರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಲಲ್ಲು, ‘ನಾವು ಗ್ರಾಮಗಳು, ಬಡ ಜನರು, ರೈತರು ಮತ್ತು ಸಾಮಾನ್ಯ ಜನರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT