‘ದೇಶವಾಸಿಗಳನ್ನು ಉದ್ದೇಶಿಸಿ ಶುಕ್ರವಾರ ನೀವು ಮಾತನಾಡುವಾಗ, ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಪ್ರಕಟಿಸಿದ್ದೀರಿ. ಇದು ನಿಜವೇ ಆಗಿದ್ದರೆ, ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನೊಂದಿರುವ ಕುಟುಂಬಗಳಿಗೆ ನ್ಯಾಯ ಒದಗಿಸುವುದು ನಿಮ್ಮ ಆದ್ಯತೆಯಾಗಬೇಕು’ ಎಂದು ಅವರು ಹೇಳಿದರು.