ಗುವಾಹಟಿ: ‘ಅಸ್ಸಾಂನ ಬಿಜೆಪಿ ನಾಯಕರು ಮಹಾಭಾರತದ ಧೃತರಾಷ್ಟ್ರ ಮತ್ತು ಶಕುನಿಯಂತೆ ಕೆಲಸ ಮಾಡುತ್ತಿದ್ದಾರೆ. ಜನರ ನಾಯಕ ಎಂದು ಹೆಸರಾಗಿರುವ ಬಿಜೆಪಿಯ ನಾಯಕರೊಬ್ಬರು ಧೃತರಾಷ್ಟ್ರನಂತೆ ವರ್ತಿಸುತ್ತಿದ್ದಾರೆ. ಹಿಂದಿನ ಚುನಾವಣೆಯ ವೇಳೆ ಅವರು ರಾಜ್ಯದ ಆರು ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡುವುದಾಗಿ ಹೇಳಿದ್ದರು. ಆದರೆ ಅವರ ಸರ್ಕಾರ ಬಂದು ಅದರ ಅವಧಿ ಮುಗಿದರೂ, ಆ ಸಮುದಾಯಗಳಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡಿಲ್ಲ. ಅವರು ಜನರನ್ನು ವಂಚಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.