ಆರೋಪಿತ ‘ಉದ್ಯೋಗಕ್ಕಾಗಿ ಭೂಮಿ ಹರಗಣ’ಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದ ಬಳಿಕ ಸರ್ಕಾರದ ವಿರುದ್ಧ ಪ್ರಿಯಾಂಕಾ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ‘ವಿರೋಧ ಪಕ್ಷಗಳ ಗಟ್ಟಿ ಧ್ವನಿಗಳ ಕುರಿತು ಬಿಜೆಪಿ ಸರ್ಕಾರಕ್ಕೆ ಭಯವೇಕೆ. ಸರ್ಕಾರವನ್ನು ಪ್ರಶ್ನಿಸುವವರ ವಿರುದ್ಧ ದಮನಕಾರಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ. ತೇಜಸ್ವಿ ಯಾದವ್ ಅವರ ವಿರುದ್ಧದ ಕ್ರಮವೂ ಇಂಥದ್ದೇ ರಾಜಕೀಯ ಪ್ರೇರಿತವಾಗಿದೆ. ಸಾರ್ವಜನಿಕರು ಇದನ್ನೆಲ್ಲಾ ನೋಡುತ್ತಿದ್ದಾರೆ ಮತ್ತು ಇದೆಲ್ಲವನ್ನೂ ನೆನಪಿನಲ್ಲಿರಿಸಿಕೊಂಡಿರುತ್ತಾರೆ’ ಎಂದು ಹೇಳಿದ್ದಾರೆ.