ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರ ಮೇಲಿನ ದೌರ್ಜನ್ಯ ತಡೆಗೆ ಪ್ರಿಯಾಂಕಾ ಗಾಂಧಿ ಒತ್ತಾಯ

ಉತ್ತರ ಪ್ರದೇಶದ ಯೋಗಿ ಸರ್ಕಾರದ ವಿರುದ್ಧ ಟೀಕೆ
Last Updated 2 ಸೆಪ್ಟೆಂಬರ್ 2020, 11:44 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದರೂ, ಇವುಗಳನ್ನು ನಿಯಂತ್ರಿಸುವಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವಿಫಲವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಹದಗೆಡುತ್ತಿದ್ದರೂ, ಆಡಳಿತಾರೂಢ ಬಿಜೆಪಿ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಉತ್ತರ ಪ್ರದೇಶದ ಮಹೋಬ, ಆಗ್ರಾ, ಗೋರಖ್‌ಪುರ, ರಾಯ್‌ಬರೇಲಿ, ಹೊರಡಿಯಲ್ಲಿ ದಲಿತರ ಹತ್ಯೆ ಪ್ರಕರಣಗಳು ನಡೆದಿವೆ. ಹಲವು ಕಡೆ ದಲಿತರ ಮೇಲೆ ದೌರ್ಜನ್ಯಗಳು ನಡೆದಿವೆ. ಎಲ್ಲೆಲ್ಲಿ ಇಂಥ ಪ್ರಕರಣಗಳು ನಡೆದಿವೆ ಎಂದು ಪಟ್ಟಿ ಮಾಡಿ, ವರದಿ ತಯಾರಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

‘ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವ ಕುರಿತು ಬಿಜೆಪಿ ಏಕೆ ಮಾತನಾಡುತ್ತಿಲ್ಲ‘ ಎಂದು ಕಾಂಗ್ರೆಸ್‌ ನಾಯಕಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಇಂಥ ಘಟನೆಗಳ ಬಗ್ಗೆ ನಿರ್ಲಕ್ಷ್ಯವಹಿಸುವುದನ್ನು ಬಿಟ್ಟು ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT