ನವದೆಹಲಿ: ಪತ್ರಕರ್ತರಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಪತ್ರಕರ್ತರ ಸ್ವಾತಂತ್ರ್ಯ ಮತ್ತು ಸುರಕ್ಷತೆ ವಿಚಾರವಾಗಿ ಕಳವಳ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ತಿಂಗಳಲ್ಲಿ ಮೂವರು ಪತ್ರಕರ್ತರ ಹತ್ಯೆ ನಡೆದಿದ್ದು, 11 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ದೂರಿದ್ದಾರೆ.
‘ಜೂನ್ 19 ರಂದು ಶುಭಾಮ್ ಮಣಿ ತ್ರಿಪಾಠಿ, ಜುಲೈ 20 ರಂದು ವಿಕ್ರಂ ಜೋಶಿ, ಆಗಸ್ಟ್ 24 ರಂದು ರತನ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ. ಮೂರು ತಿಂಗಳಲ್ಲಿ ಮೂವರು ಪತ್ರಕರ್ತರನ್ನು ಕೊಲ್ಲಲಾಗಿದೆ. 11 ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಪತ್ರಕರ್ತರ ಸುರಕ್ಷತೆ ಮತ್ತು ಸ್ವಾತಂತ್ರ್ಯದ ವಿಚಾರದಲ್ಲಿ ಸರ್ಕರದ ನಡೆ ದುರದೃಷ್ಟಕರವಾದದ್ದು’ ಎಂದು ಟ್ವೀಟ್ ಮಾಡಿದ್ದಾರೆ.
19 जून - श्री शुभममणि त्रिपाठी की हत्या
— Priyanka Gandhi Vadra (@priyankagandhi) August 25, 2020
20 जुलाई - श्री विक्रम जोशी की हत्या
24 अगस्त- श्री रतन सिंह की हत्या, बलिया
पिछले 3 महीनों में 3 पत्रकारों की हत्या।
11 पत्रकारों पर खबर लिखने के चलते FIR।
यूपी सरकार का पत्रकारों की सुरक्षा और स्वतन्त्रता को लेकर ये रवैया निंदनीय है।
ಇದಕ್ಕೂ ಮೊದಲು, ಸರ್ಕಾರದ ವೇಗಕ್ಕಿಂತಲೂ ಕ್ರೈಂ ರೇಟ್ ಹೆಚ್ಚಳವಾಗಿದೆ ಎಂದು ಹೇಳಿದ್ದರು. ‘ರಾಜ್ಯದಲ್ಲಿ ಅಪರಾಧ ಪ್ರಕರಣಗಳ ದರ ದ್ವಿಗುಣವಾಗಿದೆ. ಇದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬದ್ಧತೆಯನ್ನು ತೋರಿಸುತ್ತದೆ’ ಎಂದು ಕಿಡಿಕಾರಿದ್ದಾರೆ.
यूपी के सीएम सरकार की स्पीड बताते हैं और अपराध का मीटर उससे दोगुनी स्पीड से भागने लगता है।
— Priyanka Gandhi Vadra (@priyankagandhi) August 25, 2020
प्रत्यक्षम् किम् प्रमाणम्
ये यूपी में केवल दो दिनों का अपराध का मीटर है। यूपी सरकार बार-बार अपराध की घटनाओं पर पर्दा डालती है मगर अपराध चिंघाड़ते हुए प्रदेश की सड़कों पर तांडव कर रहा है। pic.twitter.com/vaN3J5wG2T
ಬಲ್ಲಿಯಾ ಜಿಲ್ಲೆಯಲ್ಲಿ ಹತ್ಯೆಯಾಗಿದ್ದ ರತನ್ ಸಿಂಗ್ ಕೊಲೆ ಪ್ರಕರಣ ಸಂಬಂಧ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.