ನವದೆಹಲಿ: ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ 'ವೈರಲ್ ಜ್ವರ' ಮತ್ತು ಡೆಂಗ್ಯೂನಿಂದ ಅನೇಕ ಸಾವುಗಳು ಸಂಭವಿಸುತ್ತಿರುವ ವರದಿಗಳ ನಡುವೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಗೊಂಡಿದ್ದಾರೆ. ಜ್ವರ ಹರಡುವುದನ್ನು ತಡೆಯಲು ಮತ್ತು ವೈದ್ಯಕೀಯ ಚಿಕಿತ್ಸೆ ದೊರಕಲು ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.