ನವದೆಹಲಿಯಲ್ಲಿ ಜನವರಿ 26ರಂದು ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಪ್ರತಿಭಟಿಸಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇರೆಗೆ ಬಿಡುಗಡೆಯಾಗಿರುವ ನಟ ಹಾಗೂ ಕಾರ್ಯಕರ್ತ ದೀಪ್ ಸಿಧು ಕೂಡಾ ಮಾಜಿ ಸಂಸದ ಸಿಮ್ರಾನ್ಜೀತ್ ಸಿಂಗ್ ಮನ್ ಜೊತೆ ಕಾಣಿಸಿಕೊಂಡಿದ್ದಾರೆ.