ಪಶ್ಚಿಮ ವಿಭಾಗೀಯ ರೈಲ್ವೆ ಪ್ರಕಾರ, ಫೆಬ್ರುವರಿ 7ರ ವರೆಗೆ 101 ಅನಧಿಕೃತ ಕಟ್ಟಡಗಳನ್ನು ಈ ವರೆಗೆ ನೆಲಸಮ ಮಾಡಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್, 2021ರ ಡಿಸೆಂಬರ್ನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರೈಲ್ವೆ ಸೇರಿ ಇತರ ಸ್ಥಳೀಯ ಆಡಳಿತಗಳು ಪಾಲನೆ ಮಾಡಿಲ್ಲ. ಒಕ್ಕಲೆಬ್ಬಿಸುವ ಮತ್ತು ಕಟ್ಟಡಗಳನ್ನು ನೆಲಸಮ ಮಾಡುವ ಕೆಲಸಕ್ಕೆ ಚಾಲನೆ ನೀಡುವ ಮುನ್ನ ಸಂಬಂಧಪಟ್ಟ ಆಡಳಿತಗಳು ಆ ಕಟ್ಟಡಗಳಲ್ಲಿ ವಾಸಿಸುತ್ತಿರುವವರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಅವರ ಗುರುತಿನ ದಾಖಲಾತಿ ಮಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ರೈಲ್ವೆ ಪಾಲಿಸಿಲ್ಲ ಎಂದಿತು. ಜೊತೆಗೆ, ತೀರ್ಪಿಗೆ ವಿರುದ್ಧವಾಗಿ ಕಟ್ಟಡಗಳನ್ನು ರೈಲ್ವೆ ನೆಲಸಮಗೊಳಿಸುವಂತಿಲ್ಲ ಎಂದು ನಿರ್ದೇಶಿಸಿತು.