ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 32 ಆರೋಪಿಗಳ ಪರ ವಕೀಲರು ತಮ್ಮ ವಾದ ಮಂಡಿಸಿದ್ದು, ವಿಚಾರಣೆ ಪ್ರಕ್ರಿಯೆಯು ಮಂಗಳವಾರ ಪೂರ್ಣಗೊಂಡಿತು. ಬುಧವಾರದಿಂದ ತೀರ್ಪು ಬರೆಸುವಿಕೆ ಆರಂಭಿಸುವುದಾಗಿ ನ್ಯಾಯಾಧೀಶರಾದ ಎಸ್.ಕೆ.ಯಾದವ್ ತಿಳಿಸಿದರು. ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ನಾಯಕರಾದ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರು ಆರೋಪಿಗಳಾಗಿದ್ದಾರೆ.