ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಜಿಸಿಬಿ ನಿರ್ದೇಶಕರಾಗಿ ಪ್ರೊ.ಚಂದ್ರಭಾಸ ನಾರಾಯಣ ನೇಮಕ

Last Updated 28 ಅಕ್ಟೋಬರ್ 2020, 15:52 IST
ಅಕ್ಷರ ಗಾತ್ರ

ತಿರುವನಂತಪುರ: ಇಲ್ಲಿನ ರಾಜೀವ್‌ಗಾಂಧಿ ಜೈವಿಕ ತಂತ್ರಜ್ಞಾನ ಕೇಂದ್ರದ (ಆರ್‌ಜಿಸಿಬಿ) ನಿರ್ದೇಶಕ ಸ್ಥಾನಕ್ಕೆ ಬೆಂಗಳೂರಿನ ಜವಾಹರಲಾಲ್‌ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ (ಜೆಎನ್‌ಸಿಎಎಸ್‌ಆರ್‌) ಮುಖ್ಯಸ್ಥ ಪ್ರೊ.ಚಂದ್ರಭಾಸ ನಾರಾಯಣ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಮಾಲಿಕ್ಯುಲರ್ ಬಯಾಲಜಿ ಮತ್ತು ಬಯೋಟೆಕ್‌ ಸಂಶೋಧನೆ ಹಾಗೂ ಅಭಿವೃದ್ಧಿ ಕ್ಷೇತ್ರದಲ್ಲಿ ಆರ್‌ಜಿಸಿಬಿಯು ದೇಶದ ಮುಂಚೂಣಿ ಸಂಸ್ಥೆಯಾಗಿದೆ. ಪ್ರೊ.ಎಂ.ರಾಧಾಕೃಷ್ಣ ಪಿಳ್ಳೆ ಅವರಿಂದ ತೆರವಾದ ಸ್ಥಾನಕ್ಕೆ ಚಂದ್ರಭಾಸ ಅವರನ್ನು ನೇಮಕ ಮಾಡುವ ಪ್ರಸ್ತಾವಕ್ಕೆ ಅನುಮೋದನೆ ದೊರೆತಿದೆ ಎಂದು ಪ್ರಕಟಣೆ ತಿಳಿಸಿದೆ.

ಭೌತವಿಜ್ಞಾನಿಯಾಗಿರುವ ಪ್ರೊ.ನಾರಾಯಣ ಅವರು ಜೆಎನ್‌ಸಿಎಎಸ್‌ಆರ್‌ ಸೇರಿದ ನಂತರ ಜೀವವಿಜ್ಞಾನದಲ್ಲಿ ತಮ್ಮ ಹೆಚ್ಚಿನ ಸಂಶೋಧನೆ ಕೈಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT