<p><strong>ಹತ್ರಾಸ್</strong>: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹತ್ರಾಸ್ ಜಿಲ್ಲೆಯಾದ್ಯಂತ ಅಕ್ಟೋಬರ್ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಪಿ.ಕೆ.ಲಕ್ಷಕಾರ್ ಗುರುವಾರ ತಿಳಿಸಿದ್ದಾರೆ.</p>.<p>ಇದೇ ವೇಳೆ ಜಿಲ್ಲೆಯ ಗಡಿಭಾಗಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.</p>.<p>ಹತ್ರಾಸ್ ಜಿಲ್ಲೆಯ 19 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಸಾವನ್ನಪ್ಪಿದ್ದು, ಬುಧವಾರ ಮುಂಜಾನೆ ಸಂತ್ರಸ್ಥೆಯ ಕುಟುಂಬದವರ ಅನುಪಸ್ಥಿತಿಯಲ್ಲಿ ಪೊಲೀಸರು ಆಕೆಯ ಶವಸಂಸ್ಕಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು.</p>.<p>ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ನಾಯಕರು ಕುಟುಂಬದ ಸದಸ್ಯರನ್ನು ಭೇಟಿಯಾಗಲು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.</p>.<p>ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಸಂತ್ರಸ್ಥೆಯ ಕುಟುಂಬದವರನ್ನು ಭೇಟಿಯಾಗಲು ಅವರ ಹಳ್ಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/congress-convoy-to-hathras-stopped-in-up-rahul-gandhi-priyanka-gandhi-proceed-on-foot-767067.html" target="_blank">ಹತ್ರಾಸ್ಗೆ ಹೊರಟಿದ್ದ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹತ್ರಾಸ್</strong>: ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹತ್ರಾಸ್ ಜಿಲ್ಲೆಯಾದ್ಯಂತ ಅಕ್ಟೋಬರ್ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಪಿ.ಕೆ.ಲಕ್ಷಕಾರ್ ಗುರುವಾರ ತಿಳಿಸಿದ್ದಾರೆ.</p>.<p>ಇದೇ ವೇಳೆ ಜಿಲ್ಲೆಯ ಗಡಿಭಾಗಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.</p>.<p>ಹತ್ರಾಸ್ ಜಿಲ್ಲೆಯ 19 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಸಾವನ್ನಪ್ಪಿದ್ದು, ಬುಧವಾರ ಮುಂಜಾನೆ ಸಂತ್ರಸ್ಥೆಯ ಕುಟುಂಬದವರ ಅನುಪಸ್ಥಿತಿಯಲ್ಲಿ ಪೊಲೀಸರು ಆಕೆಯ ಶವಸಂಸ್ಕಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು.</p>.<p>ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ನಾಯಕರು ಕುಟುಂಬದ ಸದಸ್ಯರನ್ನು ಭೇಟಿಯಾಗಲು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.</p>.<p>ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಸಂತ್ರಸ್ಥೆಯ ಕುಟುಂಬದವರನ್ನು ಭೇಟಿಯಾಗಲು ಅವರ ಹಳ್ಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/congress-convoy-to-hathras-stopped-in-up-rahul-gandhi-priyanka-gandhi-proceed-on-foot-767067.html" target="_blank">ಹತ್ರಾಸ್ಗೆ ಹೊರಟಿದ್ದ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>