<p class="title"><strong>ಶ್ರೀನಗರ:</strong> ಇಲ್ಲಿನ ಇಕ್ಬಾಲ್ ಉದ್ಯಾನದಲ್ಲಿ ಕಾಶ್ಮೀರ ಪಂಡಿತ, ಶ್ರೀನಗರದ ಪ್ರಮುಖ ಔಷಧ ಅಂಗಡಿ ಮಾಲೀಕ ಮಖಾನ್ ಲಾಲ್ ಬಿಂದ್ರೂ ಮಂಗಳವಾರ ಶಂಕಿತ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p class="title">ಬಿಂದ್ರೂ (68) ತಮ್ಮ ಔಷಧ ಅಂಗಡಿಯಲ್ಲಿ ಔಷಧಿಗಳನ್ನು ವಿತರಿಸುತ್ತಿರುವಾಗ ಹಂತಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="bodytext">ಗುಂಡೇಟಿನಿಂದ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದೂ ಅವರು ಹೇಳಿದರು.</p>.<p class="bodytext">1990ರಲ್ಲಿ ಭಯೋತ್ಪಾದಕ ಕೃತ್ಯಗಳು ಆರಂಭವಾದ ನಂತರ ಕಾಶ್ಮೀರದಿಂದ ವಲಸೆ ಹೋಗದೆ ಅಲ್ಲಿಯೇ ಉಳಿದಿದ್ದ ಕೆಲವೇ ಕಾಶ್ಮೀರ ಪಂಡಿತರಲ್ಲಿ ಬಿಂದ್ರೂ ಸಹ ಒಬ್ಬರು.</p>.<p class="bodytext">ಬಿಂದ್ರೂ ಅವರು ತಮ್ಮ ಪತ್ನಿಯೊಂದಿಗೆ ತಮ್ಮ ಔಷಧಾಲಯ ಬಿಂದ್ರೂ ಮೆಡಿಕೇಟ್ ಅನ್ನು ಮುಂದುವರೆಸಲು ಅಲ್ಲಿಯೇ ಉಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ:</strong> ಇಲ್ಲಿನ ಇಕ್ಬಾಲ್ ಉದ್ಯಾನದಲ್ಲಿ ಕಾಶ್ಮೀರ ಪಂಡಿತ, ಶ್ರೀನಗರದ ಪ್ರಮುಖ ಔಷಧ ಅಂಗಡಿ ಮಾಲೀಕ ಮಖಾನ್ ಲಾಲ್ ಬಿಂದ್ರೂ ಮಂಗಳವಾರ ಶಂಕಿತ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p class="title">ಬಿಂದ್ರೂ (68) ತಮ್ಮ ಔಷಧ ಅಂಗಡಿಯಲ್ಲಿ ಔಷಧಿಗಳನ್ನು ವಿತರಿಸುತ್ತಿರುವಾಗ ಹಂತಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="bodytext">ಗುಂಡೇಟಿನಿಂದ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದೂ ಅವರು ಹೇಳಿದರು.</p>.<p class="bodytext">1990ರಲ್ಲಿ ಭಯೋತ್ಪಾದಕ ಕೃತ್ಯಗಳು ಆರಂಭವಾದ ನಂತರ ಕಾಶ್ಮೀರದಿಂದ ವಲಸೆ ಹೋಗದೆ ಅಲ್ಲಿಯೇ ಉಳಿದಿದ್ದ ಕೆಲವೇ ಕಾಶ್ಮೀರ ಪಂಡಿತರಲ್ಲಿ ಬಿಂದ್ರೂ ಸಹ ಒಬ್ಬರು.</p>.<p class="bodytext">ಬಿಂದ್ರೂ ಅವರು ತಮ್ಮ ಪತ್ನಿಯೊಂದಿಗೆ ತಮ್ಮ ಔಷಧಾಲಯ ಬಿಂದ್ರೂ ಮೆಡಿಕೇಟ್ ಅನ್ನು ಮುಂದುವರೆಸಲು ಅಲ್ಲಿಯೇ ಉಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>