<p class="title"><strong>ಮುಜಾಫ್ಘರ್ ನಗರ: </strong>ಕಳೆದ ವರ್ಷ ಡಿಸೆಂಬರ್ನಲ್ಲಿ ಪ್ರತಿಭಟನನಿರತ ರೈತರಿಗೆ ನೀಡಿದ್ದ ಭರವಸೆಗಳನ್ನು ಕೇಂದ್ರ ಸರ್ಕಾರವು ಇದುವರೆಗೆ ಈಡೇರಿಸಿಲ್ಲ ಎಂದು ಆರೋಪಿಸಿರುವ ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು, ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಸಂಬಂಧಿಸಿದಂತೆ ಕಾನೂನನ್ನು ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p class="title">ಈಗಿರುವ ಪರಿಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸತ್ಯಪಾಲ್, ದೆಹಲಿಯ ಗಡಿಗಳಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿರಬಹುದು. ಆದರೆ, ಕೃಷಿಗೆ ಸಂಬಂಧಿಸಿದಂತೆ ಮೂರು ವಿವಾದಾತ್ಮಕ ಕಾಯ್ದೆಗಳ ಕುರಿತ ಅವರ ಪ್ರತಿಭಟನೆ ಬೇರೆ ಕಡೆ ಇನ್ನೂ ಜೀವಂತವಾಗಿದೆ ಎಂದರು.</p>.<p>ಬಾಘ್ರಾ ದರ್ಗಾಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಲೋಕದಳ ಮತ್ತು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿ ಮಾಡಿದ ಬಳಿಕ ಸತ್ಯಪಾಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದಲ್ಲಿನ ಹಣದುಬ್ಬರ ಮತ್ತು ನಿರುದ್ಯೋಗದಂಥ ಪ್ರಮುಖ ವಿಷಯಗಳನ್ನು ಚರ್ಚಿಸುವ ಬದಲು ಅಪ್ರಸ್ತುತ ವಿಷಯಗಳನ್ನು ಚರ್ಚಿಸಲಾಗುತ್ತಿದೆ’ ಎಂದೂ ವಿಷಾದಿಸಿದ್ದಾರೆ.</p>.<p class="bodytext">ಉತ್ತರಪ್ರದೇಶದಲ್ಲಿ ಬುಲ್ಡೋಜರ್ ಬಳಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ಸಮಯಾವಕಾಶ ನೀಡದೇ ಬಡವರ ಮನೆಗಳನ್ನು ನೆಲಸಮ ಮಾಡಬಾರದು’ ಎಂದು ಅಭಿಪ್ರಾಯಪಟ್ಟರು.</p>.<p class="bodytext">ಈ ಹಿಂದೆ ರೈತರ ಪ್ರತಿಭಟನೆಯು ಉತ್ತುಂಗದಲ್ಲಿದ್ದಾಗ ಮಲಿಕ್ ರೈತರ ಪರವಾಗಿ ಮಾತನಾಡಿ, ಕೇಂದ್ರ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು.</p>.<p class="bodytext">ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಮಲಿಕ್ ಅವರಿಗೆ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಬೇಡಿ. ಟೀಕಿಸಿದರೆ ಪಕ್ಷದ ಸ್ಥಾನಮಾನಗಳಿಂದ ವಂಚಿತರಾಗುತ್ತೀರಿ ಎಂದು ಅವರ ಸ್ನೇಹಿತರು ಸಲಹೆ ನೀಡಿದ್ದರು. ಆದರೆ, ‘ನನಗೆ ಯಾವುದೇ ಸ್ಥಾನಗಳ ಬಗ್ಗೆ ಕಾಳಜಿ ಇಲ್ಲ’ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಜಾಫ್ಘರ್ ನಗರ: </strong>ಕಳೆದ ವರ್ಷ ಡಿಸೆಂಬರ್ನಲ್ಲಿ ಪ್ರತಿಭಟನನಿರತ ರೈತರಿಗೆ ನೀಡಿದ್ದ ಭರವಸೆಗಳನ್ನು ಕೇಂದ್ರ ಸರ್ಕಾರವು ಇದುವರೆಗೆ ಈಡೇರಿಸಿಲ್ಲ ಎಂದು ಆರೋಪಿಸಿರುವ ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು, ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಸಂಬಂಧಿಸಿದಂತೆ ಕಾನೂನನ್ನು ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p class="title">ಈಗಿರುವ ಪರಿಸ್ಥಿತಿಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸತ್ಯಪಾಲ್, ದೆಹಲಿಯ ಗಡಿಗಳಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿರಬಹುದು. ಆದರೆ, ಕೃಷಿಗೆ ಸಂಬಂಧಿಸಿದಂತೆ ಮೂರು ವಿವಾದಾತ್ಮಕ ಕಾಯ್ದೆಗಳ ಕುರಿತ ಅವರ ಪ್ರತಿಭಟನೆ ಬೇರೆ ಕಡೆ ಇನ್ನೂ ಜೀವಂತವಾಗಿದೆ ಎಂದರು.</p>.<p>ಬಾಘ್ರಾ ದರ್ಗಾಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಲೋಕದಳ ಮತ್ತು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿ ಮಾಡಿದ ಬಳಿಕ ಸತ್ಯಪಾಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶದಲ್ಲಿನ ಹಣದುಬ್ಬರ ಮತ್ತು ನಿರುದ್ಯೋಗದಂಥ ಪ್ರಮುಖ ವಿಷಯಗಳನ್ನು ಚರ್ಚಿಸುವ ಬದಲು ಅಪ್ರಸ್ತುತ ವಿಷಯಗಳನ್ನು ಚರ್ಚಿಸಲಾಗುತ್ತಿದೆ’ ಎಂದೂ ವಿಷಾದಿಸಿದ್ದಾರೆ.</p>.<p class="bodytext">ಉತ್ತರಪ್ರದೇಶದಲ್ಲಿ ಬುಲ್ಡೋಜರ್ ಬಳಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ಸಮಯಾವಕಾಶ ನೀಡದೇ ಬಡವರ ಮನೆಗಳನ್ನು ನೆಲಸಮ ಮಾಡಬಾರದು’ ಎಂದು ಅಭಿಪ್ರಾಯಪಟ್ಟರು.</p>.<p class="bodytext">ಈ ಹಿಂದೆ ರೈತರ ಪ್ರತಿಭಟನೆಯು ಉತ್ತುಂಗದಲ್ಲಿದ್ದಾಗ ಮಲಿಕ್ ರೈತರ ಪರವಾಗಿ ಮಾತನಾಡಿ, ಕೇಂದ್ರ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು.</p>.<p class="bodytext">ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಮಲಿಕ್ ಅವರಿಗೆ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಬೇಡಿ. ಟೀಕಿಸಿದರೆ ಪಕ್ಷದ ಸ್ಥಾನಮಾನಗಳಿಂದ ವಂಚಿತರಾಗುತ್ತೀರಿ ಎಂದು ಅವರ ಸ್ನೇಹಿತರು ಸಲಹೆ ನೀಡಿದ್ದರು. ಆದರೆ, ‘ನನಗೆ ಯಾವುದೇ ಸ್ಥಾನಗಳ ಬಗ್ಗೆ ಕಾಳಜಿ ಇಲ್ಲ’ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>