ನವದೆಹಲಿ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಟಿ.ವಿಯ ಚರ್ಚೆಯೊಂದರಲ್ಲಿಪ್ರವಾದಿ ಮಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂದರ್ಭದಲ್ಲಿ ಸುದ್ದಿ ನಿರೂಪಣೆ ಮಾಡುತ್ತಿದ್ದ ನಾವಿಕಾ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿ ಸೋಮವಾರ ಆದೇಶಿಸಿದೆ.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ನಾವಿಕಾ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ, ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರ ಅರ್ಜಿದಾರರಿಗೆ ನೋಟಿಸ್ ಜಾರಿಗೊಳಿಸಿತು.