ನೌಕಾ ದಿನದ ಹಿನ್ನೆಲೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ಆತ್ಮನಿರ್ಭರ ಭಾರತದ ಕುರಿತು ನಮಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. 2047ರ ವೇಳೆಗೆ ಗುರಿ ಸಾಧಿಸುವುದಾಗಿ ನಾವು ಭರವಸೆ ನೀಡಿದ್ದು ಈ ದಿಸೆಯಲ್ಲಿ ಹಿಂದಿನ ಒಂದು ವರ್ಷದಲ್ಲಿ ಹಲವು ಕೆಲಸಗಳನ್ನು ಮಾಡಿದ್ದೇವೆ. ಯುದ್ಧವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ನಿರ್ಮಾಣ ಮಾಡಿರುವುದು ಮಹತ್ವದ ಹೆಜ್ಜೆಯಾಗಿದೆ’ ಎಂದಿದ್ದಾರೆ.