ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವ ರಕ್ಷಿಸುವುದೇ ಸರ್ದಾರ್ ಪಟೇಲರಿಗೆ ಸಲ್ಲಿಸುವ ಗೌರವ: ರಾಹುಲ್ ಗಾಂಧಿ

Last Updated 31 ಅಕ್ಟೋಬರ್ 2021, 8:14 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದೆ. ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರು, ಪ್ರಜಾಪ್ರಭುತ್ವದ ಎಲ್ಲಾ ಸ್ತಂಭಗಳು 'ದುರ್ಬಲಗೊಳ್ಳುತ್ತಿರುವ' ಈ ಸಮಯದಲ್ಲಿ, ಪಟೇಲರ ಕೊಡುಗೆಯನ್ನು ನೆನಪಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದ್ದಾರೆ.

'ನಮ್ಮ ಪ್ರಜಾಪ್ರಭುತ್ವದ ಎಲ್ಲಾ ಆಧಾರ ಸ್ತಂಭಗಳು ದುರ್ಬಲಗೊಂಡಿರುವಾಗ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರಮುಖ ಕೊಡುಗೆಯನ್ನು ನಾವು ನೆನಪಿಸಿಕೊಳ್ಳಬೇಕು. ಈ ಸ್ತಂಭಗಳನ್ನು ನಿರ್ಮಿಸಿದ ಕಾಂಗ್ರೆಸ್ ನಾಯಕರ ಪೈಕಿ ಪಟೇಲರು ಪ್ರಮುಖ ಧ್ವನಿಯಾಗಿದ್ದರು. ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ಸರ್ದಾರ್ ಪಟೇಲ್ ಅವರಿಗೆ ಸಲ್ಲಿಸುವ ನಿಜವಾದ ಗೌರವ' ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ರೈತರಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ಅವರ ಹೋರಾಟವು 'ರೈತರ ಮೇಲಿನ ದಬ್ಬಾಳಿಕೆಯ ವಿರುದ್ಧ ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ಬಂಡೆಯಂತೆ ನಿಲ್ಲಲು ನಮಗೆ ಸ್ಫೂರ್ತಿ ನೀಡುತ್ತದೆ' ಎಂದು ಹೇಳಿದರು.

‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಬಾರ್ಡೋಲಿ ಸತ್ಯಾಗ್ರಹದಲ್ಲಿ ರೈತರ ಹಕ್ಕುಗಳು ಮತ್ತು ಸ್ವಾಭಿಮಾನಕ್ಕಾಗಿ ಧ್ವನಿ ಎತ್ತಿದ್ದರು. ಅವರ ಹೋರಾಟವು ರೈತರ ನ್ಯಾಯಕ್ಕಾಗಿ ಮತ್ತು ಅವರ ಹಕ್ಕುಗಳ ಹೋರಾಟದಲ್ಲಿ ಬಂಡೆಯಂತೆ ನಿಲ್ಲಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

'ಭಾರತವನ್ನು ಒಗ್ಗೂಡಿಸುವ ಈ ಹೋರಾಟದಲ್ಲಿ; ದ್ವೇಷದ ವಿರುದ್ಧ ಪ್ರೀತಿಗೆ ಜಯವನ್ನು ಖಚಿತಪಡಿಸುವ ಈ ಹೋರಾಟದಲ್ಲಿ; ನಮ್ಮ ರೈತರು, ನಮ್ಮ ಜನರು, ನಮ್ಮ ರಾಷ್ಟ್ರವನ್ನು ರಕ್ಷಿಸುವ ಈ ಹೋರಾಟದಲ್ಲಿ ನಾವು ಇಂದು ಮತ್ತು ಪ್ರತಿದಿನ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಅವರನ್ನು ಸ್ಮರಿಸುತ್ತೇವೆ' ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT