ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ ಶಬನಂ ಹಷ್ಮಿ, ‘ಸುಪ್ರೀಂ ಕೋರ್ಟ್ ತೀರ್ಪು ಹೊರ ಬಂದ ದಿನವೇ ತೀಸ್ತಾ ವಿರುದ್ಧ ಎಫ್ಐಆರ್ ದಾಖಲಿಸಿ, ಬಂಧಿಸಲಾಗಿದೆ. ಇದನ್ನು ಖಂಡಿಸಲಾಗುವುದು. ಮೂವರನ್ನು ಬಂಧಿಸುವ ಮೂಲಕ ಕೇಂದ್ರ ಸರ್ಕಾರ ಇತರೆ ಹೋರಾಟಗಾರರನ್ನು ಬೆದರಿಸುವ ಮತ್ತು ಮೌನವಾಗಿರಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದರು.