ಬಿಜೆಪಿ ಸಂಸದ ಮತ್ತು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿಕೇಜ್ರಿವಾಲ್ ಅವರ ಮನೆಮುಂದೆ ಬುಧವಾರ ಪ್ರತಿಭಟನೆ ಮಾಡಿ, ದಾಂದಲೆ ನಡೆಸಿದ್ದರು. ನಿವಾಸದ ಮುಂದೆ ಇದ್ದಬ್ಯಾರಿಯರ್ ಮತ್ತು ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಧ್ವಂಸ ಮಾಡಿದ್ದರು. ಜತೆಗೆ ಮುಖ್ಯಮಂತ್ರಿಗಳ ಮನೆಯ ಕಬ್ಬಿಣದ ಗೇಟಿಗೆ ಕೇಸರಿ ಬಣ್ಣ ಬಳಿದಿದ್ದರು.