<p class="title">ತಿರುವನಂತರಪುರ: ಚರ್ಚ್ನಲ್ಲಿ ಏಕರೂಪದ ಪ್ರಾರ್ಥನಾ ಸಭೆ ಜಾರಿಗೊಳಿಸುವುದಕ್ಕೆ ಸಂಬಂಧಿಸಿ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಎರ್ನಾಕುಳಂನ ಅಂಗಮಾಲಿಯಲ್ಲಿ ಭಾನುವಾರ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಪೊಲೀಸರು ಮಧ್ಯಪ್ರದೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.</p>.<p class="bodytext">ಸೈರೊ ಮಲಬಾರ್ ಕ್ಯಾಥೋಲಿಕ್ ಚರ್ಚ್ ಅಡಿ ಬರುವ ಸೇಂಟ್ ಮೇರೀಸ್ ಕ್ಯಾಥೆಡ್ರಲ್ ಬೆಸಿಲಿಕಾದಲ್ಲಿ ಏಕರೂಪದ ಸಾಮೂಹಿಕ ಪ್ರಾರ್ಥನಾ ಸಭೆ ಆಯೋಜನೆಯು ಒಂದು ವರ್ಷದಿಂದ ಜಾರಿಯಲ್ಲಿತ್ತು. ಈ ಪದ್ಧತಿಯನ್ನೇ ಎಲ್ಲಾ ಚರ್ಚ್ಗಳಲ್ಲೂ ಜಾರಿಗೆ ತರಲು ಚರ್ಚ್ ಮಂಡಳಿ ನಿರ್ಧರಿಸಿತ್ತು. ಈ ಕುರಿತು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಲೇ ಇದ್ದವು.</p>.<p class="bodytext">ಈ ನೀತಿಯನ್ನು ವಿರೋಧಿಸುತ್ತಿದ್ದ ವರ್ಗವು ಆರ್ಚ್ಬಿಷಪ್ರಾದ ಆ್ಯಂಡ್ರೂಸ್ ತಾಜ್ಹಾತ್ ಅವರು ಚರ್ಚ್ ಒಳಗೆ ಪ್ರವೇಶಿಸದಂತೆ ಭಾನುವಾರ ಚರ್ಚ್ ದ್ವಾರಕ್ಕೆ ಬೀಗ ಹಾಕಿದ್ದಾರೆ. ಇದು ಮತ್ತೊಂದು ವರ್ಗದವರನ್ನು ಕೆರಳಿಸಿತು. ಈ ಹಿನ್ನೆಲೆಯಲ್ಲಿ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಹಲವಾರು ಆಸ್ತಿಪಾಸ್ತಿ ಹಾನಿಗೀಡಾಗಿವೆ.</p>.<p class="bodytext">ಎರಡೂ ವರ್ಗದವರನ್ನು ಚರ್ಚ್ನಿಂದ ಹೊರಕಳಿಸಿದಪೊಲೀಸರು ಚರ್ಚ್ಗೆ ಬೀಗ ಹಾಕಿದ್ದಾರೆ. ಈ ವಿವಾದ ಇತ್ಯರ್ಥ ಆಗುವವರೆಗೂ ಚರ್ಚ್ ಅನ್ನು ಜಿಲ್ಲಾಡಳಿತದ ನಿಯಂತ್ರಣಕ್ಕೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ತಿರುವನಂತರಪುರ: ಚರ್ಚ್ನಲ್ಲಿ ಏಕರೂಪದ ಪ್ರಾರ್ಥನಾ ಸಭೆ ಜಾರಿಗೊಳಿಸುವುದಕ್ಕೆ ಸಂಬಂಧಿಸಿ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಎರ್ನಾಕುಳಂನ ಅಂಗಮಾಲಿಯಲ್ಲಿ ಭಾನುವಾರ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಪೊಲೀಸರು ಮಧ್ಯಪ್ರದೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.</p>.<p class="bodytext">ಸೈರೊ ಮಲಬಾರ್ ಕ್ಯಾಥೋಲಿಕ್ ಚರ್ಚ್ ಅಡಿ ಬರುವ ಸೇಂಟ್ ಮೇರೀಸ್ ಕ್ಯಾಥೆಡ್ರಲ್ ಬೆಸಿಲಿಕಾದಲ್ಲಿ ಏಕರೂಪದ ಸಾಮೂಹಿಕ ಪ್ರಾರ್ಥನಾ ಸಭೆ ಆಯೋಜನೆಯು ಒಂದು ವರ್ಷದಿಂದ ಜಾರಿಯಲ್ಲಿತ್ತು. ಈ ಪದ್ಧತಿಯನ್ನೇ ಎಲ್ಲಾ ಚರ್ಚ್ಗಳಲ್ಲೂ ಜಾರಿಗೆ ತರಲು ಚರ್ಚ್ ಮಂಡಳಿ ನಿರ್ಧರಿಸಿತ್ತು. ಈ ಕುರಿತು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಲೇ ಇದ್ದವು.</p>.<p class="bodytext">ಈ ನೀತಿಯನ್ನು ವಿರೋಧಿಸುತ್ತಿದ್ದ ವರ್ಗವು ಆರ್ಚ್ಬಿಷಪ್ರಾದ ಆ್ಯಂಡ್ರೂಸ್ ತಾಜ್ಹಾತ್ ಅವರು ಚರ್ಚ್ ಒಳಗೆ ಪ್ರವೇಶಿಸದಂತೆ ಭಾನುವಾರ ಚರ್ಚ್ ದ್ವಾರಕ್ಕೆ ಬೀಗ ಹಾಕಿದ್ದಾರೆ. ಇದು ಮತ್ತೊಂದು ವರ್ಗದವರನ್ನು ಕೆರಳಿಸಿತು. ಈ ಹಿನ್ನೆಲೆಯಲ್ಲಿ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಹಲವಾರು ಆಸ್ತಿಪಾಸ್ತಿ ಹಾನಿಗೀಡಾಗಿವೆ.</p>.<p class="bodytext">ಎರಡೂ ವರ್ಗದವರನ್ನು ಚರ್ಚ್ನಿಂದ ಹೊರಕಳಿಸಿದಪೊಲೀಸರು ಚರ್ಚ್ಗೆ ಬೀಗ ಹಾಕಿದ್ದಾರೆ. ಈ ವಿವಾದ ಇತ್ಯರ್ಥ ಆಗುವವರೆಗೂ ಚರ್ಚ್ ಅನ್ನು ಜಿಲ್ಲಾಡಳಿತದ ನಿಯಂತ್ರಣಕ್ಕೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>