<p><strong>ದೆಹಲಿ: </strong>ಸರ್ಕಾರದೊಂದಿಗೆ ನಡೆದ ಮಾತುಕತೆಗಳು ಯಶಸ್ವಿಯಾಗದ ಕಾರಣ ಕೊರೆಯ ಚಳಿಯನ್ನೂ ಲೆಕ್ಕಿಸದೇ ದೆಹಲಿಯ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.</p>.<p>ಹೊಸ ವರ್ಷದ ದಿನವಾದ ಶುಕ್ರವಾರದಂದು ಸಿಂಘು ಗಡಿ ಪ್ರದೇಶದಲ್ಲಿ 1.1 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದ್ದು, ಇದು ಹದಿನೈದು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನವಾಗಿದೆ. ಇಂಥ ಕೊರೆಯುವ ಚಳಿಯಲ್ಲೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/severe-cold-wave-in-delhi-on-new-years-day-minimum-temperature-lowest-in-15-years-792422.html" itemprop="url">ದೆಹಲಿಯಲ್ಲಿ ತೀವ್ರ ಚಳಿ: ಹೊಸ ವರ್ಷದ ಮೊದಲ ದಿನ 15 ವರ್ಷಗಳಲ್ಲೇ ಕನಿಷ್ಠ ತಾಪಮಾನ</a></p>.<p>ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಬುಧವಾರ ನಡೆದ ಸಭೆಯಲ್ಲಿ ವಿದ್ಯುತ್ ದರ ಹೆಚ್ಚಳ ಮತ್ತು ಕೃಷಿ ತ್ಯಾಜ್ಯ ಸುಡುವುದರ ವಿರುದ್ಧ ದಂಡ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿತ್ತು. ಆದರೆ, ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಹಾಗೂ ಕನಿಷ್ಠ ಬೆಂಬಲ ಬೆಲೆ ಕುರಿತು ಖಾತರಿ ನೀಡುವಂತಹ ವಿಚಾರದಲ್ಲಿ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಒಮ್ಮತ ಮೂಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ: </strong>ಸರ್ಕಾರದೊಂದಿಗೆ ನಡೆದ ಮಾತುಕತೆಗಳು ಯಶಸ್ವಿಯಾಗದ ಕಾರಣ ಕೊರೆಯ ಚಳಿಯನ್ನೂ ಲೆಕ್ಕಿಸದೇ ದೆಹಲಿಯ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.</p>.<p>ಹೊಸ ವರ್ಷದ ದಿನವಾದ ಶುಕ್ರವಾರದಂದು ಸಿಂಘು ಗಡಿ ಪ್ರದೇಶದಲ್ಲಿ 1.1 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದ್ದು, ಇದು ಹದಿನೈದು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನವಾಗಿದೆ. ಇಂಥ ಕೊರೆಯುವ ಚಳಿಯಲ್ಲೂ ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/severe-cold-wave-in-delhi-on-new-years-day-minimum-temperature-lowest-in-15-years-792422.html" itemprop="url">ದೆಹಲಿಯಲ್ಲಿ ತೀವ್ರ ಚಳಿ: ಹೊಸ ವರ್ಷದ ಮೊದಲ ದಿನ 15 ವರ್ಷಗಳಲ್ಲೇ ಕನಿಷ್ಠ ತಾಪಮಾನ</a></p>.<p>ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಬುಧವಾರ ನಡೆದ ಸಭೆಯಲ್ಲಿ ವಿದ್ಯುತ್ ದರ ಹೆಚ್ಚಳ ಮತ್ತು ಕೃಷಿ ತ್ಯಾಜ್ಯ ಸುಡುವುದರ ವಿರುದ್ಧ ದಂಡ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿತ್ತು. ಆದರೆ, ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಹಾಗೂ ಕನಿಷ್ಠ ಬೆಂಬಲ ಬೆಲೆ ಕುರಿತು ಖಾತರಿ ನೀಡುವಂತಹ ವಿಚಾರದಲ್ಲಿ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಒಮ್ಮತ ಮೂಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>