ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಬುಧವಾರ ನಡೆದ ಸಭೆಯಲ್ಲಿ ವಿದ್ಯುತ್ ದರ ಹೆಚ್ಚಳ ಮತ್ತು ಕೃಷಿ ತ್ಯಾಜ್ಯ ಸುಡುವುದರ ವಿರುದ್ಧ ದಂಡ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿತ್ತು. ಆದರೆ, ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಹಾಗೂ ಕನಿಷ್ಠ ಬೆಂಬಲ ಬೆಲೆ ಕುರಿತು ಖಾತರಿ ನೀಡುವಂತಹ ವಿಚಾರದಲ್ಲಿ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಒಮ್ಮತ ಮೂಡಲಿಲ್ಲ.