ವಿಜಯನ್ ಅವರು ಸೋಮವಾರ ಅವರ ತವರು ಕ್ಷೇತ್ರ ಕಣ್ಣೂರಿನಿಂದ ತಿರುವನಂತಪುರಕ್ಕೆ ಮರಳುವಾಗ ವಿಮಾನದಲ್ಲಿ ಈ ಘಟನೆ ನಡೆದಿದೆ. ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ವಿಜಯನ್ ಅವರು ರಾಜೀನಾಮೆ ನೀಡಬೇಕು ಎಂದು ವಿಮಾನದೊಳಗೆ ಬಂದು ಇಬ್ಬರು ಪ್ರತಿಭಟಿಸಿದ್ದಾರೆ. ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ಕೆಳಗೆ ತಳ್ಳಿದ್ದಾರೆ.