ಚೆನ್ನೈ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆಯಲ್ಲಿ ಪಕ್ಷದ ಮೇಲಿನ ಹಿಡಿತಕ್ಕಾಗಿ ಇಬ್ಬರು ನಾಯಕರ ನಡುವೆ ಆಂತರಿಕ ಕಚ್ಚಾಟ ಸುದೀರ್ಘಾವಧಿಗೆ ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿವೆ. ಪಕ್ಷದಲ್ಲಿ ಮೂಲೆಗುಂಪಾಗಿರುವ ನಾಯಕ ಒ. ಪನ್ನೀರ್ಸೆಲ್ವಂ (ಒಪಿಎಸ್) ಚುನಾವಣಾ ಆಯೋಗದ ಕದ ತಟ್ಟಿದ್ದು, ಮತ್ತೊಬ್ಬ ಪ್ರಭಾವಿ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಬಣವು ಪಕ್ಷದ ಹಿಡಿತ ಬಿಟ್ಟುಕೊಡದಿರಲು ಪಟ್ಟುಹಿಡಿದಿದೆ.