‘ಅಂತರರಾಷ್ಟ್ರೀಯ ಸಮುದಾಯ ಮತ್ತು ಭಾರತದ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರೂ ಮೊದಲ ಮತ್ತು ಎರಡನೇ ಅಲೆಯ ಅಂತರದ ನಡುವಣ ಅವಧಿಯನ್ನು ಮಹತ್ವದ ಸಂಪನ್ಮೂಲಗಳನ್ನು ಸಂಗ್ರಹಿಸಿಕೊಳ್ಳಲು ಬಳಸಿಕೊಳ್ಳಲಿಲ್ಲ. ಈ ಅವಧಿಯಲ್ಲಿ ವೈದ್ಯಕೀಯ ಸಿಬ್ಬಂದಿ ಹೆಚ್ಚಿಸಲು, ಹಾಸಿಗೆಗಳು, ಆಮ್ಲಜನಕ, ವೆಂಟಿಲೇಟರ್ಗಳು, ಔಷಧ ಮತ್ತು ಇತರ ಉಪಕರಣಗಳು ಸೇರಿದಂತೆ ವೈದ್ಯಕೀಯಕ್ಕೆ ಸಂಬಂಧಿಸಿದ ಸಂಪನ್ಮೂಲಗಳನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿತ್ತು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.