ರೈತರು, ಕಾರ್ಮಿಕರು ಮತ್ತು ಮಧ್ಯಮ ವರ್ಗಗಳ ದುಡ್ಡಿನಲ್ಲಿ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಕಾಯುವ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತಿದೆ. ಸಾರ್ವಜನಿಕರ ಮೇಲೆ ಹೊರೆಯನ್ನು ಹೇರುವ ಮೂಲಕ ಜನ ವಿರೋಧಿ, ಕಾರ್ಮಿಕರ ವಿರೋಧಿ ಹೆಜ್ಜೆಗಳು ಸರ್ಕಾರ ಇಡುತ್ತಿದೆ. ಇದನ್ನು ಒಗ್ಗಟ್ಟಿನ ಪ್ರತಿಭಟನೆಗಳ ಮೂಲಕ ವಿರೋಧಿಸಬೇಕು ಎಂದು ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ.