ನವದೆಹಲಿ: ಕೇಂದ್ರ ಸರ್ಕಾರವು ಇಲ್ಲಿರುವರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಚೇರಿಗಳ ಭದ್ರತೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಿಬ್ಬಂದಿಯನ್ನು ನಿಯೋಜಿಸಿರುವುದನ್ನು ಕಾಂಗ್ರೆಸ್ ಟೀಕಿಸಿದೆ.
‘ಆರ್ಎಸ್ಎಸ್ ಕಚೇರಿಗಳ ರಕ್ಷಣೆಗೆ ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣ ಸೇರಿದಂತೆ ಸರ್ಕಾರದ ಆಸ್ತಿಗಳ ರಕ್ಷಣೆಗೆ ಖಾಸಗಿಯವರನ್ನು ನಿಯೋಜಿಸಲಾಗಿದೆ. ಇದೆಂತಾ ವಿಚಿತ್ರ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ನಲ್ಲಿ ಹೇಳಿದ್ದಾರೆ.