<p><strong>ಲಖನೌ</strong>: ಇಂಧನ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರುಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p>.<p>‘ಪೆಟ್ರೋಲ್ ಮತ್ತು ಡೀಸೆಲ್ ದರವು ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟದಲ್ಲಿ ಏರಿಕೆಯಾದ ರೀತಿ ಮತ್ತು ದೇಶದಲ್ಲಿ ಹಣದುಬ್ಬರಹೆಚ್ಚಾಗುತ್ತಿರುವ ಬಗೆಯನ್ನು ಜನರು ಅಷ್ಟು ಸುಲಭವಾಗಿ ಮರೆಯುವುದಿಲ್ಲ‘ ಎಂದು ಮಾಯಾವತಿ ಹೇಳಿದ್ದಾರೆ.</p>.<p>ಮುಂದುವರಿದು, ಸದ್ಯ ಯಾವೆಲ್ಲ ಉತ್ಪನ್ನಗಳ ಬೆಲೆ ಇಳಿಕೆ ಮಾಡಲಾಗಿದೆಯೋ ಅವು, ವಿವಿಧ ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಮತ್ತೆ ಏರಿಕೆಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅವರು (ಕೇಂದ್ರ ಸರ್ಕಾರ) ಬೆಲೆ ಇಳಿಕೆ ಮಾಡಿದ್ದಾರೆ. ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಈ ಪಕ್ಷವು (ಬಿಜೆಪಿ) ಬೆಲೆ ಇಳಿಕೆ ನಿರ್ಧಾರವನ್ನು ಹಿಂಪಡೆಯಲಿದೆ. ಜನರು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು‘ ಎಂದು ಮನವಿ ಮಾಡಿದ್ದಾರೆ.</p>.<p>2022ರಲ್ಲಿ ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ.</p>.<p>403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ2017ರಲ್ಲಿ ನಡೆದ ಚುನಾವಣೆಯಲ್ಲಿ ಶೇ.39.67 ರಷ್ಟು ಮತಗಳನ್ನು ಪಡೆದುಕೊಂಡಿದ್ದ ಬಿಜೆಪಿ, ಬರೋಬ್ಬರಿ 312 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು.</p>.<p>ಉಳಿದಂತೆ ಸಮಾಜವಾದಿ ಪಕ್ಷ (ಎಸ್ಪಿ) 47 ಮತ್ತು ಬಿಎಸ್ಪಿ 19 ಸ್ಥಾನಗಳಲ್ಲಿ ಜಯ ಗಳಿಸಿದರೆ, ಕಾಂಗ್ರೆಸ್ ಕೇವಲ 7 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಇಂಧನ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರುಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p>.<p>‘ಪೆಟ್ರೋಲ್ ಮತ್ತು ಡೀಸೆಲ್ ದರವು ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟದಲ್ಲಿ ಏರಿಕೆಯಾದ ರೀತಿ ಮತ್ತು ದೇಶದಲ್ಲಿ ಹಣದುಬ್ಬರಹೆಚ್ಚಾಗುತ್ತಿರುವ ಬಗೆಯನ್ನು ಜನರು ಅಷ್ಟು ಸುಲಭವಾಗಿ ಮರೆಯುವುದಿಲ್ಲ‘ ಎಂದು ಮಾಯಾವತಿ ಹೇಳಿದ್ದಾರೆ.</p>.<p>ಮುಂದುವರಿದು, ಸದ್ಯ ಯಾವೆಲ್ಲ ಉತ್ಪನ್ನಗಳ ಬೆಲೆ ಇಳಿಕೆ ಮಾಡಲಾಗಿದೆಯೋ ಅವು, ವಿವಿಧ ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಮತ್ತೆ ಏರಿಕೆಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅವರು (ಕೇಂದ್ರ ಸರ್ಕಾರ) ಬೆಲೆ ಇಳಿಕೆ ಮಾಡಿದ್ದಾರೆ. ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಈ ಪಕ್ಷವು (ಬಿಜೆಪಿ) ಬೆಲೆ ಇಳಿಕೆ ನಿರ್ಧಾರವನ್ನು ಹಿಂಪಡೆಯಲಿದೆ. ಜನರು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು‘ ಎಂದು ಮನವಿ ಮಾಡಿದ್ದಾರೆ.</p>.<p>2022ರಲ್ಲಿ ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ.</p>.<p>403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ2017ರಲ್ಲಿ ನಡೆದ ಚುನಾವಣೆಯಲ್ಲಿ ಶೇ.39.67 ರಷ್ಟು ಮತಗಳನ್ನು ಪಡೆದುಕೊಂಡಿದ್ದ ಬಿಜೆಪಿ, ಬರೋಬ್ಬರಿ 312 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು.</p>.<p>ಉಳಿದಂತೆ ಸಮಾಜವಾದಿ ಪಕ್ಷ (ಎಸ್ಪಿ) 47 ಮತ್ತು ಬಿಎಸ್ಪಿ 19 ಸ್ಥಾನಗಳಲ್ಲಿ ಜಯ ಗಳಿಸಿದರೆ, ಕಾಂಗ್ರೆಸ್ ಕೇವಲ 7 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>