ನಾಲ್ವರು ಶಾಸಕರ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ, ವಿಧಾನಸಭೆಯ ವಿರೋಧ ಪಕ್ಷ ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸ್ವಾಮಿ ನೇತೃತ್ವದಲ್ಲಿ 14 ಶಾಸಕರ ನಿಯೋಗ, ವಿ.ನಾರಾಯಣ ಸ್ವಾಮಿಯವರು ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತ್ತು. ಈ ಮನವಿ ಮೇರೆಗೆ ಬಹುಮತ ಸಾಬೀತು ಪಡಿಸುವಂತೆ ನಾರಾಯಣಸ್ವಾಮಿ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಸೂಚಿಸಿದ್ದಾರೆ.