ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುದುಚೇರಿ: 22 ರಂದು ಬಹುಮತ ಸಾಬೀತಿಗೆ ಸಿ.ಎಂಗೆ ಸೂಚನೆ

Last Updated 18 ಫೆಬ್ರುವರಿ 2021, 22:08 IST
ಅಕ್ಷರ ಗಾತ್ರ

ಪುದುಚೇರಿ: ಅಲ್ಪಮತಕ್ಕೆ ಕುಸಿದಿರುವ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಇದೇ 22 ರಂದು ಸದನದಲ್ಲಿ ಬಹುಮತ ಸಾಬೀತುಪಡಿಸಲು ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರ್‌ರಾಜನ್‌ ಹೇಳಿದ್ದಾರೆ.

ನಾಲ್ವರು ಶಾಸಕರ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ, ವಿಧಾನಸಭೆಯ ವಿರೋಧ ಪಕ್ಷ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್‌.ರಂಗಸ್ವಾಮಿ ನೇತೃತ್ವದಲ್ಲಿ 14 ಶಾಸಕರ ನಿಯೋಗ, ವಿ.ನಾರಾಯಣ ಸ್ವಾಮಿಯವರು ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತ್ತು. ಈ ಮನವಿ ಮೇರೆಗೆ ಬಹುಮತ ಸಾಬೀತು ಪಡಿಸುವಂತೆ ನಾರಾಯಣಸ್ವಾಮಿ ಅವರಿಗೆ ಲೆಫ್ಟಿನೆಂಟ್‌ ಗವರ್ನರ್‌ ಸೂಚಿಸಿದ್ದಾರೆ.

ಫೆಬ್ರುವರಿ 22 ರಂದು ಸಂಜೆ 5 ರೊಳಗೆ ಬಹುಮತ ಸಾಬೀತು ಪಡಿಸುವ ಪ್ರಕ್ರಿಯೆ ಮುಕ್ತಾಯಗೊಳಿಸಲಾಗುವುದು. ಕೈ ಎತ್ತುವ ಮೂಲಕ ಮತದಾನ ನಡೆಯಲಿದ್ದು, ಅದರ ವಿಡಿಯೊ ಮಾಡಲಾಗುವುದು ಎಂದು ಗವರ್ನರ್‌ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT