‘ಏಕತಾ ದಿನ‘ದ ಅಂಗವಾಗಿಕೆವಾಡಿಯಾದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ, ಚೌಧರಿ ಹೇಳಿಕೆ ಉಲ್ಲೇಖಿಸಿ ಮಾತನಾಡಿದ ಮೋದಿ ‘ಪುಲ್ವಾಮ ದಾಳಿಯ ನಂತರ ಕೆಲವರು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿದ್ದನ್ನು ಈ ದೇಶದ ಜನ ಇನ್ನೂ ಮರೆತಿಲ್ಲ. ಸೈನಿಕರ ವೀರ ಮರಣದ ಹಿನ್ನೆಲೆಯಲ್ಲಿ ಇಡೀ ದೇಶವೇ ಕಂಬನಿ ಮಿಡಿಯುತ್ತಿತ್ತು. ಆ ಸಂದರ್ಭದಲ್ಲಿ ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಅವರೆಲ್ಲರ ಬಣ್ಣ ಈಗ ಬಯಲಾಗಿದೆ’ ಎಂದು ಮೋದಿ, ವಿರೋಧ ಪಕ್ಷಗಳನ್ನು ಕುಟುಕಿದ್ದಾರೆ.