ನವದೆಹಲಿ: ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಮಸೂದೆಗಳನ್ನು ರಾಜ್ಯಸಭೆಯಲ್ಲಿ ಭಾನುವಾರ ಅಂಗೀಕರಿಸಲಾಗಿದೆ. ಇದಕ್ಕೆ ಪ್ರತಿಪಕ್ಷಗಳೂ ಸೇರಿದಂತೆ ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾದ ಶಿರೋಮಣಿ ಅಕಾಲಿ ದಳದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.