<p><strong>ಚಂಡೀಗಡ: </strong>ಪಂಜಾಬ್ ವಿಧಾನಸಭೆಯಲ್ಲಿ ಮಂಗಳವಾರ ನಾಲ್ಕು ಮಸೂದೆಗಳನ್ನು ಸರ್ವಾನುಮತದಿಂದ ಅಂಗೀಕರಿಸುವ ಜತೆಗೆ, ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಕೈಗೊಳ್ಳಲಾಯಿತು.</p>.<p>ವಿಧಾನಸಭೆಯಲ್ಲಿ ಐದು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಮಸೂದೆಗಳನ್ನು ಅಂಗೀಕರಿಸಲಾಯಿತು. ಈ ವೇಳೆ ಬಿಜೆಪಿ ಶಾಸಕರು ಕಲಾಪದಲ್ಲಿ ಭಾಗವಹಿಸಿರಲಿಲ್ಲ. ಪ್ರಸ್ತುತ ವಿಧಾನಸಭೆಯಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದಾರೆ.</p>.<p>ಮಸೂದೆಗಳ ಅಂಗೀಕಾರ ಮತ್ತು ಕೃಷಿ ಮಸೂದೆಗಳ ವಿರುದ್ಧ ನಿರ್ಣಯವನ್ನು ವಿರೋಧಪಕ್ಷಗಳಾದ ಎಸ್ಎಡಿ, ಎಎಪಿ ಮತ್ತು ಲೋಕ್ಇನ್ಸಾಫ್ನ ಶಾಸಕರು ಬೆಂಬಲಿಸಿದರು.</p>.<p>ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಗೆ ಗೋಧಿ ಅಥವಾ ಭತ್ತವನ್ನು ಖರೀದಿ ಅಥವಾ ಮಾರಾಟ ಮಾಡಿದರೆ, ಅಂಥವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು. ಎರಡೂವರೆ ಎಕರೆ ಒಳಗೆ ಜಮೀನು ಹೊಂದಿರುವ ರೈತರಿಗೆ ಈ ನಿಬಂಧನೆಯಿಂದ ವಿನಾಯಿತಿ ನೀಡಲಾಗಿದೆ. ಕಾಳಸಂತೆಯಲ್ಲಿ ಧಾನ್ಯಗಳನ್ನು ಮಾರಾಟ ಮಾಡುವುದನ್ನು ತಪ್ಪಿಸುವುದಕ್ಕಾಗಿ ಈ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ.</p>.<p>ಮಸೂದೆಗಳ ಅಂಗೀಕಾರಕ್ಕೆ ಮುನ್ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸರ್ವಪಕ್ಷಗಳ ಸಭೆ ನಡೆಸಿದರು. ಮಸೂದೆಗಳ ಅಂಗೀಕಾರ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಕೈಗೊಳ್ಳುವ ಮುನ್ನ ಮುಖ್ಯಮಂತ್ರಿಯವರು ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ: </strong>ಪಂಜಾಬ್ ವಿಧಾನಸಭೆಯಲ್ಲಿ ಮಂಗಳವಾರ ನಾಲ್ಕು ಮಸೂದೆಗಳನ್ನು ಸರ್ವಾನುಮತದಿಂದ ಅಂಗೀಕರಿಸುವ ಜತೆಗೆ, ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಕೈಗೊಳ್ಳಲಾಯಿತು.</p>.<p>ವಿಧಾನಸಭೆಯಲ್ಲಿ ಐದು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಮಸೂದೆಗಳನ್ನು ಅಂಗೀಕರಿಸಲಾಯಿತು. ಈ ವೇಳೆ ಬಿಜೆಪಿ ಶಾಸಕರು ಕಲಾಪದಲ್ಲಿ ಭಾಗವಹಿಸಿರಲಿಲ್ಲ. ಪ್ರಸ್ತುತ ವಿಧಾನಸಭೆಯಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದಾರೆ.</p>.<p>ಮಸೂದೆಗಳ ಅಂಗೀಕಾರ ಮತ್ತು ಕೃಷಿ ಮಸೂದೆಗಳ ವಿರುದ್ಧ ನಿರ್ಣಯವನ್ನು ವಿರೋಧಪಕ್ಷಗಳಾದ ಎಸ್ಎಡಿ, ಎಎಪಿ ಮತ್ತು ಲೋಕ್ಇನ್ಸಾಫ್ನ ಶಾಸಕರು ಬೆಂಬಲಿಸಿದರು.</p>.<p>ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆಗೆ ಗೋಧಿ ಅಥವಾ ಭತ್ತವನ್ನು ಖರೀದಿ ಅಥವಾ ಮಾರಾಟ ಮಾಡಿದರೆ, ಅಂಥವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗುತ್ತದೆ ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು. ಎರಡೂವರೆ ಎಕರೆ ಒಳಗೆ ಜಮೀನು ಹೊಂದಿರುವ ರೈತರಿಗೆ ಈ ನಿಬಂಧನೆಯಿಂದ ವಿನಾಯಿತಿ ನೀಡಲಾಗಿದೆ. ಕಾಳಸಂತೆಯಲ್ಲಿ ಧಾನ್ಯಗಳನ್ನು ಮಾರಾಟ ಮಾಡುವುದನ್ನು ತಪ್ಪಿಸುವುದಕ್ಕಾಗಿ ಈ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ.</p>.<p>ಮಸೂದೆಗಳ ಅಂಗೀಕಾರಕ್ಕೆ ಮುನ್ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸರ್ವಪಕ್ಷಗಳ ಸಭೆ ನಡೆಸಿದರು. ಮಸೂದೆಗಳ ಅಂಗೀಕಾರ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಕೈಗೊಳ್ಳುವ ಮುನ್ನ ಮುಖ್ಯಮಂತ್ರಿಯವರು ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>