<p><strong>ಚಂಡಿಗಡ: </strong>ನೂತನ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊಂಡಿದ್ದು,ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ಇಂದು(ಶನಿವಾರ) ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿ ಚನ್ನಿಯವರು ಮಧ್ಯಾಹ್ನ 12.30ಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದ್ದು ಭಾನುವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿ ಚನ್ನಿ ಅವರು ನೂತನ ಸಚಿವ ಸಂಪುಟಕ್ಕೆ ಸೇರುವ ಶಾಸಕರನ್ನು ಅಂತಿಮಗೊಳಿಸುವ ಕುರಿತು ಹೈಕಮಾಂಡ್ ನೊಂದಿಗೆ ಚರ್ಚಿಸಿ ಶನಿವಾರ ದೆಹಲಿಯಿಂದ ವಾಪಸಾದ ಕೆಲವು ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.</p>.<p>ಚನ್ನಿ ನೇತೃತ್ವದ ಸಚಿವ ಸಂಪುಟದಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಅಮರಿಂದರ್ ಸಿಂಗ್ ಸಚಿವ ಸಂಪುಟದಲ್ಲಿದ್ದ ಐವರು ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ಚನ್ನಿ ಅವರಿಗೆ ದೆಹಲಿಗೆ ಬರುವಂತೆ ಶುಕ್ರವಾರ ಸೂಚನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಡ: </strong>ನೂತನ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿ ಅಂತಿಮಗೊಂಡಿದ್ದು,ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ಇಂದು(ಶನಿವಾರ) ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿ ಚನ್ನಿಯವರು ಮಧ್ಯಾಹ್ನ 12.30ಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದ್ದು ಭಾನುವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿ ಚನ್ನಿ ಅವರು ನೂತನ ಸಚಿವ ಸಂಪುಟಕ್ಕೆ ಸೇರುವ ಶಾಸಕರನ್ನು ಅಂತಿಮಗೊಳಿಸುವ ಕುರಿತು ಹೈಕಮಾಂಡ್ ನೊಂದಿಗೆ ಚರ್ಚಿಸಿ ಶನಿವಾರ ದೆಹಲಿಯಿಂದ ವಾಪಸಾದ ಕೆಲವು ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.</p>.<p>ಚನ್ನಿ ನೇತೃತ್ವದ ಸಚಿವ ಸಂಪುಟದಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಅಮರಿಂದರ್ ಸಿಂಗ್ ಸಚಿವ ಸಂಪುಟದಲ್ಲಿದ್ದ ಐವರು ಸಚಿವರನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ಚನ್ನಿ ಅವರಿಗೆ ದೆಹಲಿಗೆ ಬರುವಂತೆ ಶುಕ್ರವಾರ ಸೂಚನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>