<p><strong>ಚಂಡೀಗಢ:</strong> ರಾಜ್ಯದಾದ್ಯಂತ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್ಎಫ್ಎಸ್ಎ) ವ್ಯಾಪ್ತಿಗೆ ಬರುವ 1.41 ಕೋಟಿ ಫಲಾನುಭವಿಗಳಿಗೆಸ್ಮಾರ್ಟ್ ರೇಷನ್ ಕಾರ್ಡ್ (ಪಡಿತರ ಚೀಟಿ) ಯೋಜನೆ ಹಾಗೂ ಎನ್ಎಫ್ಎಸ್ಎ ವ್ಯಾಪ್ತಿಗೆ ಒಳಪಡದ ಸುಮಾರು 9 ಲಕ್ಷ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಪಡಿತರ ಒಗಿಸುವ ಪ್ರತ್ಯೇಕ ಅನುದಾನಿತಯೋಜನೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಚಾಲನೆ ನೀಡಿದರು.</p>.<p>ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಸ್ಮಾರ್ಟ್ ಪಡಿತರ ಚೀಟಿ ಯೋಜನೆಯ ಅಡಿಯಲ್ಲಿ ಈ ತಿಂಗಳು ಒಟ್ಟು 37.5 ಲಕ್ಷ ಅರ್ಹ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಗುವುದು. ಇದರೊಂದಿಗೆ ರಾಜ್ಯದ ಫಲಾನುಭವಿಗಳ ಸಂಖ್ಯೆ 1.50 ಕೋಟಿಗೆ ಏರಿಕೆಯಾಗಲಿದೆ ಎಂದು ಮುಖ್ಯಮಂತ್ರಿಗಳು ಹೇಳಿರುವುದಾಗಿ ತಿಳಿಸಲಾಗಿದೆ.</p>.<p>‘1.41 ಕೋಟಿ ಫಲಾನುಭವಿಗಳು ಕೇಂದ್ರದ ಎನ್ಎಫ್ಎಸ್ಎ ವ್ಯಾಪ್ತಿಗೆ ಬರಲಿದ್ದಾರೆ. ಪದೇಪದೆ ಮನವಿ ಮಾಡಿದ ಹೊರತಾಗಿಯೂ ಸುಮಾರು 9 ಲಕ್ಷ ಜನರು ಕೇಂದ್ರದ ಎನ್ಎಫ್ಎಸ್ಎ ವ್ಯಾಪ್ತಿಗೆ ಒಳಪಟ್ಟಿಲ್ಲ. ಹಾಗಾಗಿ ಪಂಜಾಬ್ ಸರ್ಕಾರವು ಅಂತಹ ಎಲ್ಲ ಅರ್ಹ ವ್ಯಕ್ತಿಗಳನ್ನು ಒಳಗೊಳ್ಳುವ ರಾಜ್ಯ ಅನುದಾನಿತ ಪಡಿತರ ಯೋಜನೆಯನ್ನು ಆರಂಭಿಸಲು ನಿರ್ಧರಿಸಿತು. ಅದರ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು’ ಎಂದೂ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ರಾಜ್ಯದಾದ್ಯಂತ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್ಎಫ್ಎಸ್ಎ) ವ್ಯಾಪ್ತಿಗೆ ಬರುವ 1.41 ಕೋಟಿ ಫಲಾನುಭವಿಗಳಿಗೆಸ್ಮಾರ್ಟ್ ರೇಷನ್ ಕಾರ್ಡ್ (ಪಡಿತರ ಚೀಟಿ) ಯೋಜನೆ ಹಾಗೂ ಎನ್ಎಫ್ಎಸ್ಎ ವ್ಯಾಪ್ತಿಗೆ ಒಳಪಡದ ಸುಮಾರು 9 ಲಕ್ಷ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಪಡಿತರ ಒಗಿಸುವ ಪ್ರತ್ಯೇಕ ಅನುದಾನಿತಯೋಜನೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಚಾಲನೆ ನೀಡಿದರು.</p>.<p>ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಸ್ಮಾರ್ಟ್ ಪಡಿತರ ಚೀಟಿ ಯೋಜನೆಯ ಅಡಿಯಲ್ಲಿ ಈ ತಿಂಗಳು ಒಟ್ಟು 37.5 ಲಕ್ಷ ಅರ್ಹ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಗುವುದು. ಇದರೊಂದಿಗೆ ರಾಜ್ಯದ ಫಲಾನುಭವಿಗಳ ಸಂಖ್ಯೆ 1.50 ಕೋಟಿಗೆ ಏರಿಕೆಯಾಗಲಿದೆ ಎಂದು ಮುಖ್ಯಮಂತ್ರಿಗಳು ಹೇಳಿರುವುದಾಗಿ ತಿಳಿಸಲಾಗಿದೆ.</p>.<p>‘1.41 ಕೋಟಿ ಫಲಾನುಭವಿಗಳು ಕೇಂದ್ರದ ಎನ್ಎಫ್ಎಸ್ಎ ವ್ಯಾಪ್ತಿಗೆ ಬರಲಿದ್ದಾರೆ. ಪದೇಪದೆ ಮನವಿ ಮಾಡಿದ ಹೊರತಾಗಿಯೂ ಸುಮಾರು 9 ಲಕ್ಷ ಜನರು ಕೇಂದ್ರದ ಎನ್ಎಫ್ಎಸ್ಎ ವ್ಯಾಪ್ತಿಗೆ ಒಳಪಟ್ಟಿಲ್ಲ. ಹಾಗಾಗಿ ಪಂಜಾಬ್ ಸರ್ಕಾರವು ಅಂತಹ ಎಲ್ಲ ಅರ್ಹ ವ್ಯಕ್ತಿಗಳನ್ನು ಒಳಗೊಳ್ಳುವ ರಾಜ್ಯ ಅನುದಾನಿತ ಪಡಿತರ ಯೋಜನೆಯನ್ನು ಆರಂಭಿಸಲು ನಿರ್ಧರಿಸಿತು. ಅದರ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು’ ಎಂದೂ ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>