<p><strong>ಚಂಡೀಗಡ: </strong>ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ತಮ್ಮ ಮೊದಲ ಸಂಪುಟ ಸಭೆಯಲ್ಲೇ 10,000 ಪೊಲೀಸ್ ಹುದ್ದೆಗಳು ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿನ 25,000 ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದಾರೆ.</p>.<p>ಮೊದಲ ಸಂಪುಟ ಸಭೆಯ ನಂತರ ವಿಡಿಯೊ ಸಂದೇಶದಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.</p>.<p>ಒಂದು ತಿಂಗಳೊಳಗೆ ಈ ಉದ್ಯೋಗಗಳಿಗೆ ಜಾಹೀರಾತು ಮತ್ತು ಅಧಿಸೂಚನೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>‘ಮುಂದಿನ ದಿನಗಳಲ್ಲಿ, ನಾವು ನಮ್ಮ ಉಳಿದ ಚುನಾವಣೆ ಭರವಸೆಗಳನ್ನು ಪೂರೈಸುತ್ತೇವೆ’ಎಂದು ಅವರು ಹೇಳಿದ್ದಾರೆ.</p>.<p>ಪಂಜಾಬ್ ಪೊಲೀಸ್ ಇಲಾಖೆಯಲ್ಲಿ 10,000 ಉದ್ಯೋಗ ಭರ್ತಿ ಮಾಡಲಾಗುವುದು ಮತ್ತು ಉಳಿದವುಗಳನ್ನು ವಿವಿಧ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಅರ್ಹತೆಯ ಮೇರೆಗೆ ಉದ್ಯೋಗ ನೀಡಲಾಗುವುದು. ಯಾವುದೇ ತಾರತಮ್ಯವಿಲ್ಲ, ಶಿಫಾರಸು ಮತ್ತು ಲಂಚಕ್ಕೆ ಆಸ್ಪದವಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಈ ಐತಿಹಾಸಿಕ ನಿರ್ಧಾರವು ಯುವಕರಿಗೆ ಪಾರದರ್ಶಕ ಮತ್ತು ಅರ್ಹತೆ ಆಧಾರಿತ ಕಾರ್ಯವಿಧಾನದ ಮೂಲಕ ಸರ್ಕಾರಿ ವಲಯದಲ್ಲಿ ಉದ್ಯೋಗಗಳನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.</p>.<p>ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷವು ಪ್ರಸ್ತಾಪಿಸಿದ್ದ ರಾಜ್ಯದ ಪ್ರಮುಖ ಸಮಸ್ಯೆಗಳಲ್ಲಿ ನಿರುದ್ಯೋಗವು ಒಂದು. ಪಕ್ಷ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿ ಉದ್ಯೋಗನೀಡುವ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ: </strong>ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ತಮ್ಮ ಮೊದಲ ಸಂಪುಟ ಸಭೆಯಲ್ಲೇ 10,000 ಪೊಲೀಸ್ ಹುದ್ದೆಗಳು ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿನ 25,000 ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದಾರೆ.</p>.<p>ಮೊದಲ ಸಂಪುಟ ಸಭೆಯ ನಂತರ ವಿಡಿಯೊ ಸಂದೇಶದಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.</p>.<p>ಒಂದು ತಿಂಗಳೊಳಗೆ ಈ ಉದ್ಯೋಗಗಳಿಗೆ ಜಾಹೀರಾತು ಮತ್ತು ಅಧಿಸೂಚನೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>‘ಮುಂದಿನ ದಿನಗಳಲ್ಲಿ, ನಾವು ನಮ್ಮ ಉಳಿದ ಚುನಾವಣೆ ಭರವಸೆಗಳನ್ನು ಪೂರೈಸುತ್ತೇವೆ’ಎಂದು ಅವರು ಹೇಳಿದ್ದಾರೆ.</p>.<p>ಪಂಜಾಬ್ ಪೊಲೀಸ್ ಇಲಾಖೆಯಲ್ಲಿ 10,000 ಉದ್ಯೋಗ ಭರ್ತಿ ಮಾಡಲಾಗುವುದು ಮತ್ತು ಉಳಿದವುಗಳನ್ನು ವಿವಿಧ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಅರ್ಹತೆಯ ಮೇರೆಗೆ ಉದ್ಯೋಗ ನೀಡಲಾಗುವುದು. ಯಾವುದೇ ತಾರತಮ್ಯವಿಲ್ಲ, ಶಿಫಾರಸು ಮತ್ತು ಲಂಚಕ್ಕೆ ಆಸ್ಪದವಿಲ್ಲ ಎಂದು ಅವರು ಹೇಳಿದ್ದಾರೆ.</p>.<p>ಈ ಐತಿಹಾಸಿಕ ನಿರ್ಧಾರವು ಯುವಕರಿಗೆ ಪಾರದರ್ಶಕ ಮತ್ತು ಅರ್ಹತೆ ಆಧಾರಿತ ಕಾರ್ಯವಿಧಾನದ ಮೂಲಕ ಸರ್ಕಾರಿ ವಲಯದಲ್ಲಿ ಉದ್ಯೋಗಗಳನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.</p>.<p>ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷವು ಪ್ರಸ್ತಾಪಿಸಿದ್ದ ರಾಜ್ಯದ ಪ್ರಮುಖ ಸಮಸ್ಯೆಗಳಲ್ಲಿ ನಿರುದ್ಯೋಗವು ಒಂದು. ಪಕ್ಷ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿ ಉದ್ಯೋಗನೀಡುವ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>