ರೈತರ ಪ್ರತಿಭಟನೆ ಆರಂಭವಾದಾಗಿನಿಂದ, ಸುಮಾರು ಒಂದು ತಿಂಗಳಲ್ಲಿ 1,411 ಟವರ್ಗಳಿಗೆ ಹಾನಿ ಉಂಟುಮಾಡಲಾಗಿದೆ. ವಿದ್ಯುತ್ ತಂತಿಗಳನ್ನು ಕತ್ತರಿಸಿ, ಟವರ್ಗಳಿಗೆ ಸಂಪರ್ಕ ಒದಗಿಸುವ ವ್ಯವಸ್ಥೆಗೆ ಹಾನಿ ಮಾಡುವ ಪ್ರಯತ್ನಗಳು ಸಹ ನಡೆದಿವೆ. ಪ್ರತಿಭಟನಾಕಾರರನ್ನು ತಡೆಯಲು ಮುಂದಾದ ಸೈಟ್ ಮ್ಯಾನೇಜರ್ಗಳನ್ನು ನಿಂದಿಸಲಾಗಿದೆ, ಕೆಲವರನ್ನು ಪ್ರತಿಭಟನಾಕಾರರು ಥಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.