<p><strong>ಸಂಗ್ರೂರ್</strong>: ಮಾದಕ ವ್ಯಸನದ ವಿರುದ್ಧದ ಹೋರಾಟಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಭಾನುವಾರ ಚಾಲನೆ ನೀಡಿದರು.</p>.<p>ತಮ್ಮ ಸ್ವಂತ ಜಿಲ್ಲೆಯಾದ ಸಂಗ್ರೂರ್ನಲ್ಲಿ 15,000ಕ್ಕೂ ಅಧಿಕ ಸೈಕ್ಲಿಸ್ಟ್ಗಳ ಜೊತೆಗೂಡಿ ಡ್ರಗ್ ಜಾಗೃತಿ ರ್ಯಾಲಿ ನಡೆಸಿದರು.</p>.<p>ರ್ಯಾಲಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ‘ಸಂಗ್ರೂರ್ ಕ್ರಾಂತಿಕಾರಿಗಳ ನಾಡು. ಇಂದು ಸಂಗ್ರೂರಿನ ಜನತೆ ಉದಾತ್ತ ಉದ್ದೇಶಕ್ಕಾಗಿ ಮತ್ತೊಮ್ಮೆ ಇಲ್ಲಿ ಸೇರಿದ್ದಾರೆ’ ಎಂದು ತಿಳಿಸಿದರು.</p>.<p>ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಮತ್ತು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವ ಯುವಕರನ್ನು ಎಚ್ಚರಿಸುವುದು ಈ ರ್ಯಾಲಿಯ ಉದ್ದೇಶವಾಗಿದೆ ಎಂದು ಮಾನ್ ಹೇಳಿದರು.</p>.<p>ನಶೆಯ ಮೆದುಳನ್ನು ದೆವ್ವದ ಕಾರ್ಯಾಗಾರ ಎಂದು ಹೇಳಿರುವ ಅವರು, ‘ಹೆಚ್ಚಿನ ಉದ್ಯೋಗಾವಕಾಶಗಳು ಇದ್ದರೆ, ಸಮಾಜದಲ್ಲಿ ಮಾದಕ ದ್ರವ್ಯಗಳಿಗೆ ಜಾಗವೇ ಇರುವುದಿಲ್ಲ’ ಎಂದು ತಿಳಿಸಿದರು.</p>.<p>ಸಮಾಜದಿಂದ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡಲು ತಮ್ಮ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸುತ್ತಿದೆ ಎಂದೂ ಮಾನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಗ್ರೂರ್</strong>: ಮಾದಕ ವ್ಯಸನದ ವಿರುದ್ಧದ ಹೋರಾಟಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಭಾನುವಾರ ಚಾಲನೆ ನೀಡಿದರು.</p>.<p>ತಮ್ಮ ಸ್ವಂತ ಜಿಲ್ಲೆಯಾದ ಸಂಗ್ರೂರ್ನಲ್ಲಿ 15,000ಕ್ಕೂ ಅಧಿಕ ಸೈಕ್ಲಿಸ್ಟ್ಗಳ ಜೊತೆಗೂಡಿ ಡ್ರಗ್ ಜಾಗೃತಿ ರ್ಯಾಲಿ ನಡೆಸಿದರು.</p>.<p>ರ್ಯಾಲಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ‘ಸಂಗ್ರೂರ್ ಕ್ರಾಂತಿಕಾರಿಗಳ ನಾಡು. ಇಂದು ಸಂಗ್ರೂರಿನ ಜನತೆ ಉದಾತ್ತ ಉದ್ದೇಶಕ್ಕಾಗಿ ಮತ್ತೊಮ್ಮೆ ಇಲ್ಲಿ ಸೇರಿದ್ದಾರೆ’ ಎಂದು ತಿಳಿಸಿದರು.</p>.<p>ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದು ಮತ್ತು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವ ಯುವಕರನ್ನು ಎಚ್ಚರಿಸುವುದು ಈ ರ್ಯಾಲಿಯ ಉದ್ದೇಶವಾಗಿದೆ ಎಂದು ಮಾನ್ ಹೇಳಿದರು.</p>.<p>ನಶೆಯ ಮೆದುಳನ್ನು ದೆವ್ವದ ಕಾರ್ಯಾಗಾರ ಎಂದು ಹೇಳಿರುವ ಅವರು, ‘ಹೆಚ್ಚಿನ ಉದ್ಯೋಗಾವಕಾಶಗಳು ಇದ್ದರೆ, ಸಮಾಜದಲ್ಲಿ ಮಾದಕ ದ್ರವ್ಯಗಳಿಗೆ ಜಾಗವೇ ಇರುವುದಿಲ್ಲ’ ಎಂದು ತಿಳಿಸಿದರು.</p>.<p>ಸಮಾಜದಿಂದ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡಲು ತಮ್ಮ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸುತ್ತಿದೆ ಎಂದೂ ಮಾನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>