ಪ್ರಧಾನಿ ನರೇಂದ್ರ ಮೋದಿಗೆ ಉಂಟಾಗಿದ್ದ ಭದ್ರತಾ ಲೋಪ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಚನ್ನಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚನ್ನಿ ಸರ್ಕಾರದ ಸೂಚನೆಯಂತೆಯೇ ಪೊಲೀಸರು ಪ್ರತಿಭಟನಾನಿರತ ರೈತರನ್ನು ರಸ್ತೆಯಿಂದ ತೆರವುಗೊಳಿಸಿರಲಿಲ್ಲ. ಹೀಗಾಗಿ ಪ್ರಧಾನಿಯವರು ಅಲ್ಲಿ ಸಿಲುಕಿಹಾಕಿಕೊಳ್ಳುವಂತಾಗಿತ್ತು ಎಂದು ಅವರು ಆರೋಪಿಸಿದ್ದಾರೆ.