ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳು ಗಣಿಗಾರಿಕೆ: ಪಂಜಾಬ್ ಸಿಎಂ ಸಂಬಂಧಿಗೆ 14 ದಿನಗಳ ನ್ಯಾಯಾಂಗ ಬಂಧನ

Last Updated 11 ಫೆಬ್ರುವರಿ 2022, 11:36 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಸಿಎಂ ಸೋದರ ಸಂಬಂಧಿ ಭೂಪಿಂದರ್ ಸಿಂಗ್ ಹನಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪಂಜಾಬ್ ಸಿಎಂ ಚರಣ್‌ಜೀತ್ ಸಿಂಗ್ ಚನ್ನಿ ಸಂಬಂಧಿಯೂ ಆಗಿರುವ ಭೂಪಿಂದರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಲಂಧರ್ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದ್ದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ, ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಸಿಂಗ್ ಅವರ ಬಂಧನ ಅವಧಿ ಮುಗಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಫೆಬ್ರುವರಿ 3ರ ರಾತ್ರಿ ಸಿಂಗ್ ಬಂಧನವಾಗಿದ್ದು, 8ರ ವರೆಗೆ ಇಡಿ ವಶಕ್ಕೆ ನೀಡಲಾಗಿತ್ತು. ಬಳಿಕ ಫೆ. 11ರವರೆಗೆ ಬಂಧನ ಅವಧಿ ವಿಸ್ತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT