ವಿಶ್ವಾಸ ಮತದ ನಿರ್ಣಯದ ಕುರಿತು ನಡೆದ ಚರ್ಚೆಗೆ ಅಕಾಲಿದಳ ಮತ್ತು ಕಾಂಗ್ರೆಸ್ ಶಾಸಕರು ಪದೇಪದೇ ಅಡ್ಡಿಪಡಿಸಿದರು. ಈ ವೇಳೆ ಮಾತನಾಡಿದಭಗವಂತ್ ಅವರು,ಬಿಜೆಪಿಯ ‘ಆಪರೇಷನ್ ಕಮಲ’ವನ್ನು ಕಾಂಗ್ರೆಸ್ ಪಕ್ಷವು ಬೆಂಬಲಿಸುತ್ತಿದೆ. ಹಾಗಾಗಿಯೇ, ಆ ಪಕ್ಷದ ಶಾಸಕರು ಸದನದಲ್ಲಿ ಚರ್ಚಿಸುವುದನ್ನು ಬಿಟ್ಟು ಹೊರ ನಡೆದರು ಎಂದು ಆರೋಪಿಸಿದರು.