<p><strong>ಚಂಡೀಗಢ:</strong> 'ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ನನ್ನ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ,' ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಅಮರಿಂದರ್ ಸಿಂಗ್ 'ಪ್ರಶಾಂತ್ ಕಿಶೋರ್ ಅವರು ನನ್ನ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ ಎಂಬ ವಿಷಯ ಹಂಚಿಕೊಳ್ಳಲು ಸಂತೋಷವಾಗಿದೆ. ಪಂಜಾಬ್ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ,' ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.</p>.<p>ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸದ್ಯದ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.</p>.<p>ಸದ್ಯ, ಕಿಶೋರ್ ಅವರ ಕಂಪನಿ, 'ಭಾರತೀಯ ರಾಜಕೀಯ ಕ್ರಿಯಾ ಸಮಿತಿ' (ಐ-ಪಿಎಸಿ) ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ನೆರವು ನೀಡುತ್ತಿದೆ.</p>.<p>ಚುನಾವಣಾ ಪ್ರಚಾರಕ್ಕೆ ಪ್ರಶಾಂತ್ ಕಿಶೋರ್ ಅವರನ್ನು ಕರೆಸಬೇಕೇ ಬೇಡವೇ ಎಂದು ಕಾಂಗ್ರೆಸ್ ಶಾಸಕರನ್ನು ಕೇಳಲಾಯಿತು. 80 ಶಾಸಕರ ಪೈಕಿ 55 ಮಂದಿ ಪ್ರಶಾಂತ್ ಕಿಶೋರ್ ಅಗತ್ಯವಿದೆ ಎಂದು ಹೇಳಿದ್ದಾರೆ ಎಂದು ಸಿಎಂ ಸಿಂಗ್ ತಿಳಿಸಿದ್ದಾರೆ.</p>.<p>ಈ ಹಿಂದಿನ ಚುನಾವಣೆಯಲ್ಲೂ ಪ್ರಶಾಂತ್ ಕಿಶೋರ್ ಅವರು ಪಂಜಾಬ್ನಲ್ಲಿ ಅಮರಿಂದರ್ ಸಿಂಗ್ ಪರ ಕೆಲಸ ಮಾಡಿದ್ದರು. ಅಮರಿಂದರ್ ಸಿಂಗ್ ಮುಖ್ಯಮಂತ್ರಿಯಾಗಿದ್ದರು.</p>.<p>ಪ್ರಶಾಂತ್ ಕಿಶೋರ್ ಅವರು 2014ರ ಲೋಕಸಭೆ ಚುನಾವಣೆ ವೇಳೆ ಮೋದಿ ಅವರ ಪ್ರಚಾರ ಉಸ್ತುವಾರಿ ವಹಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> 'ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ನನ್ನ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ,' ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಅಮರಿಂದರ್ ಸಿಂಗ್ 'ಪ್ರಶಾಂತ್ ಕಿಶೋರ್ ಅವರು ನನ್ನ ಪ್ರಧಾನ ಸಲಹೆಗಾರರಾಗಿ ಸೇರಿಕೊಂಡಿದ್ದಾರೆ ಎಂಬ ವಿಷಯ ಹಂಚಿಕೊಳ್ಳಲು ಸಂತೋಷವಾಗಿದೆ. ಪಂಜಾಬ್ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ,' ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.</p>.<p>ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸದ್ಯದ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.</p>.<p>ಸದ್ಯ, ಕಿಶೋರ್ ಅವರ ಕಂಪನಿ, 'ಭಾರತೀಯ ರಾಜಕೀಯ ಕ್ರಿಯಾ ಸಮಿತಿ' (ಐ-ಪಿಎಸಿ) ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ನೆರವು ನೀಡುತ್ತಿದೆ.</p>.<p>ಚುನಾವಣಾ ಪ್ರಚಾರಕ್ಕೆ ಪ್ರಶಾಂತ್ ಕಿಶೋರ್ ಅವರನ್ನು ಕರೆಸಬೇಕೇ ಬೇಡವೇ ಎಂದು ಕಾಂಗ್ರೆಸ್ ಶಾಸಕರನ್ನು ಕೇಳಲಾಯಿತು. 80 ಶಾಸಕರ ಪೈಕಿ 55 ಮಂದಿ ಪ್ರಶಾಂತ್ ಕಿಶೋರ್ ಅಗತ್ಯವಿದೆ ಎಂದು ಹೇಳಿದ್ದಾರೆ ಎಂದು ಸಿಎಂ ಸಿಂಗ್ ತಿಳಿಸಿದ್ದಾರೆ.</p>.<p>ಈ ಹಿಂದಿನ ಚುನಾವಣೆಯಲ್ಲೂ ಪ್ರಶಾಂತ್ ಕಿಶೋರ್ ಅವರು ಪಂಜಾಬ್ನಲ್ಲಿ ಅಮರಿಂದರ್ ಸಿಂಗ್ ಪರ ಕೆಲಸ ಮಾಡಿದ್ದರು. ಅಮರಿಂದರ್ ಸಿಂಗ್ ಮುಖ್ಯಮಂತ್ರಿಯಾಗಿದ್ದರು.</p>.<p>ಪ್ರಶಾಂತ್ ಕಿಶೋರ್ ಅವರು 2014ರ ಲೋಕಸಭೆ ಚುನಾವಣೆ ವೇಳೆ ಮೋದಿ ಅವರ ಪ್ರಚಾರ ಉಸ್ತುವಾರಿ ವಹಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>