ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕ ಸಿಧು ಪಟಿಯಾಲಾ ಕಾರಾಗೃಹದಿಂದ ಆಸ್ಪತ್ರೆಗೆ

ಅಕ್ಷರ ಗಾತ್ರ

ಚಂಡೀಗಡ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಿಧು ಅವರನ್ನು ‍ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ ಎಂದು ಉಲ್ಲೇಖಿಸಿದೆ.

34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10ರಲ್ಲಿ ಇರಿಸಲಾಗಿತ್ತು.

ಅವರ ಜತೆ ಕೊಠಡಿಯಲ್ಲಿ ಇನ್ನೂ ನಾಲ್ಕು ಕೈದಿಗಳು ಇದ್ದಾರೆ ಎಂದು ಕಾರಾಗೃಹದ ಮೂಲಗಳು ಶನಿವಾರ ಹೇಳಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT