ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬಿಗಳ ಆದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುವೆ: ಅಕಾಲಿದಳ ಅಧ್ಯಕ್ಷ ಬಾದಲ್‌

Last Updated 10 ಮಾರ್ಚ್ 2022, 9:29 IST
ಅಕ್ಷರ ಗಾತ್ರ

ಬೆಂಗಳೂರು: ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ಸ್ಪಷ್ಟ ಬಹುಮತ ಸಿಗುವುದು ಖಚಿತವಾಗಿದೆ. ಇದೇ ವೇಳೆ ಅಖಾಲಿದಳಕ್ಕೆ ತೀವ್ರ ಹಿನ್ನೆಡೆಯಾಗಿದ್ದು ಸೋಲನ್ನು ಒಪ್ಪಿಕೊಂಡಿರುವುದಾಗಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್‌ ಸಿಂಗ್‌ ಬಾದಲ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪಂಜಾಬಿಗಳು ನೀಡಿದ ಆದೇಶವನ್ನು ಪೂರ್ಣ ಹೃದಯ ಹಾಗೂ ನಮ್ರತೆಯಿಂದ ಸ್ವೀಕರಿಸುತ್ತೇವೆ’ ಎಂದು ಹೇಳಿದ್ದಾರೆ.

ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಆಮ್‌ ಆದ್ಮಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿರುವ ಬಾದಲ್‌, ‘ಪಂಜಾಬಿಗಳ ಆಶೋತ್ತರಗಳಿಗೆ ಅನುಗುಣವಾಗಿ ಆಮ್‌ ಆದ್ಮಿ ಪಕ್ಷ ಮತ್ತು ಭಗವಂತ ಮಾನ್‌ ನಡೆದುಕೊಳ್ಳಲಿದ್ದಾರೆ ಎಂಬ ಭರವಸೆ ಇದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT