<p><strong>ಚಂಡೀಗಡ:</strong> ಪಂಜಾಬ್ನ ಎಎಪಿ ಸರ್ಕಾರವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ರೈತರು ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.</p>.<p>ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಭಗವಂತ ಮಾನ್ ನಡುವೆ ಬುಧವಾರ ನಡೆದ ಮಾತುಕತೆ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದಾರೆ.</p>.<p>ರೈತರ ಬೇಡಿಕೆಯನ್ನು ಮನ್ನಿಸಿ ಜೂನ್ 14ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಜೂನ್ 10ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಬೇಕೆಂದು ರೈತರು ಪಟ್ಟುಹಿಡಿದಿದ್ದರು.</p>.<p><a href="https://www.prajavani.net/india-news/punjab-farmers-begin-protest-at-chandigarh-mohali-border-bhagwant-mann-says-open-for-talks-937726.html" itemprop="url">ಚಂಡಿಗಢದಲ್ಲಿ ರೈತರ ಪ್ರತಿಭಟನೆ; ಮಾತುಕತೆಗೆ ಸಿದ್ಧ ಎಂದ ಸಿಎಂ ಭಗವಂತಮಾನ್ </a></p>.<p>ಬಳಿಕ ‘ಭಾರ್ತಿ ಕಿಸಾನ್ ಯೂನಿಯನ್ (ಸಿಧ್ಪುರ್)’ ಅಧ್ಯಕ್ಷ ಜಗ್ಜಿತ್ ಸಿಂಗ್ ದಲ್ಲೆವಾಲ್ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.</p>.<p>ಗೋಧಿ ಬೆಳೆಗೆ ಬೋನಸ್, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡೀಗಡ–ಮೊಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಪಂಜಾಬ್ನ ಎಎಪಿ ಸರ್ಕಾರವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ರೈತರು ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.</p>.<p>ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಭಗವಂತ ಮಾನ್ ನಡುವೆ ಬುಧವಾರ ನಡೆದ ಮಾತುಕತೆ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದಾರೆ.</p>.<p>ರೈತರ ಬೇಡಿಕೆಯನ್ನು ಮನ್ನಿಸಿ ಜೂನ್ 14ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಜೂನ್ 10ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಬೇಕೆಂದು ರೈತರು ಪಟ್ಟುಹಿಡಿದಿದ್ದರು.</p>.<p><a href="https://www.prajavani.net/india-news/punjab-farmers-begin-protest-at-chandigarh-mohali-border-bhagwant-mann-says-open-for-talks-937726.html" itemprop="url">ಚಂಡಿಗಢದಲ್ಲಿ ರೈತರ ಪ್ರತಿಭಟನೆ; ಮಾತುಕತೆಗೆ ಸಿದ್ಧ ಎಂದ ಸಿಎಂ ಭಗವಂತಮಾನ್ </a></p>.<p>ಬಳಿಕ ‘ಭಾರ್ತಿ ಕಿಸಾನ್ ಯೂನಿಯನ್ (ಸಿಧ್ಪುರ್)’ ಅಧ್ಯಕ್ಷ ಜಗ್ಜಿತ್ ಸಿಂಗ್ ದಲ್ಲೆವಾಲ್ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.</p>.<p>ಗೋಧಿ ಬೆಳೆಗೆ ಬೋನಸ್, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡೀಗಡ–ಮೊಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>