ಚಂಡೀಗಡ: ಪಂಜಾಬ್ನ ಎಎಪಿ ಸರ್ಕಾರವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ರೈತರು ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.
ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಭಗವಂತ ಮಾನ್ ನಡುವೆ ಬುಧವಾರ ನಡೆದ ಮಾತುಕತೆ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದಾರೆ.
ರೈತರ ಬೇಡಿಕೆಯನ್ನು ಮನ್ನಿಸಿ ಜೂನ್ 14ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಜೂನ್ 10ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಬೇಕೆಂದು ರೈತರು ಪಟ್ಟುಹಿಡಿದಿದ್ದರು.