ಬೇಡಿಕೆಗೆ ಮಣಿದ ಪಂಜಾಬ್ ಸರ್ಕಾರ: ರೈತರ ಪ್ರತಿಭಟನೆ ಅಂತ್ಯ
ಚಂಡೀಗಡ: ಪಂಜಾಬ್ನ ಎಎಪಿ ಸರ್ಕಾರವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ರೈತರು ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.
ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಭಗವಂತ ಮಾನ್ ನಡುವೆ ಬುಧವಾರ ನಡೆದ ಮಾತುಕತೆ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದಾರೆ.
ರೈತರ ಬೇಡಿಕೆಯನ್ನು ಮನ್ನಿಸಿ ಜೂನ್ 14ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಜೂನ್ 10ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಬೇಕೆಂದು ರೈತರು ಪಟ್ಟುಹಿಡಿದಿದ್ದರು.
ಚಂಡಿಗಢದಲ್ಲಿ ರೈತರ ಪ್ರತಿಭಟನೆ; ಮಾತುಕತೆಗೆ ಸಿದ್ಧ ಎಂದ ಸಿಎಂ ಭಗವಂತ ಮಾನ್
ಬಳಿಕ ‘ಭಾರ್ತಿ ಕಿಸಾನ್ ಯೂನಿಯನ್ (ಸಿಧ್ಪುರ್)’ ಅಧ್ಯಕ್ಷ ಜಗ್ಜಿತ್ ಸಿಂಗ್ ದಲ್ಲೆವಾಲ್ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.
ಗೋಧಿ ಬೆಳೆಗೆ ಬೋನಸ್, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡೀಗಡ–ಮೊಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.